ರಾಜಕೀಯ ಒತ್ತಡ – ಚನ್ನರಾಯಪಟ್ಟಣ ಟೌನ್ ಎಸ್‍ಐ ಆತ್ಮಹತ್ಯೆ

Public TV
1 Min Read

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಎಸ್‍ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಲಾಳಿನಕೆರೆ ಗ್ರಾಮದವಾರದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಎರಡು ದಿನದಲ್ಲಿ ಚನ್ನರಾಯಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ಮಾಡಿದ್ದರು. ಜೊತೆಗೆ ಈ ಕೊಲೆಗೆ ಸಂಬಂಧಿದಂತೆ ಆರೋಪಿಗಳ ಬಂಧಿಸುವಲ್ಲಿ ಅವರಿಗೆ ರಾಜಕೀಯ ಒತ್ತಡವಿತ್ತು ಎಂದು ಹೇಳಲಾಗುತ್ತಿದೆ.

ಇಂದು ವರಮಹಾಲಕ್ಷ್ಮಿ ಹಬ್ಬ ಇದ್ದರಿಂದ ಪತ್ನಿ ತಂದೆ ಮನೆಗೆ ಹೋಗಿದ್ದರು. ಇವರು ಸಹ ಮಾವನ ಮನೆಗೆ ಹೋಗಿ ಬೆಳಗ್ಗೆ ಉಪಹಾರ ತಿಂದು ಬಂದು ತಾವು ವಾಸವಿದ್ದ ಮನೆಯಲ್ಲಿ ಪ್ಯಾನ್‍ಗೆ ನೇಣು ಬಿಗಿದುಕೂಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ್ಗೆ ಎರಡು ದಿನಗಳಲ್ಲಿ ನಗರದಲ್ಲಿ ಎರಡು ಕೊಲೆಗಳಾಗಿದ್ದು ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಸದ್ಯ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರ ದಲ್ಲಿ ಮೃತ ದೇಹ ಇಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *