ರಾಜುಗೌಡ, ಕುಮಾರ್ ಬಂಗಾರಪ್ಪಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳ ಆಗ್ರಹ

Public TV
1 Min Read

– ರಾಜುಗೌಡ ಅಭಿಮಾನಿಗಳಿಂದ ಎಚ್ಚರಿಕೆಯ ಸಂದೇಶ

ಯಾದಗಿರಿ/ಶಿವಮೊಗ್ಗ: ಶಾಸಕರಾದ ರಾಜೂಗೌಡ ಮತ್ತು ಕುಮಾರ್ ಬಂಗಾರಪ್ಪ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಅಭಿಮಾನಿಗಳು ಆಗ್ರಹಿಸಿದ್ದಾರೆ. ಕುಮಾರ್ ಬಂಗಾರಪ್ಪ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ಸಚಿವ ಸ್ಥಾನ ಸಿಗುವಂತೆ ಪ್ರಾರ್ಥಿಸಿದರು.

ಸೊರಬ ತಾಲೂಕಿನ ಮತ್ತು ರಾಜ್ಯದ ಅಭಿವೃದ್ಧಿ, ಪಕ್ಷದ ಸಂಘಟನೆಗಾಗಿ, ಹಿಂದುಳಿದ ವರ್ಗದವರ ಕಲ್ಯಾಣಕ್ಕಾಗಿ ಅವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ಹಿನ್ನೆಲೆಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರ ಹೆಸರಿನಲ್ಲಿ ಅವರ ಕುಲ ದೇವರಾದ ತಾಲೂಕಿನ ಮಂಚಿ ಆಂಜನೇಯ ಸ್ವಾಮಿಗೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಉದ್ರಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಹನುಮಂತಪ್ಪ, ಸುರೇಶ್, ಸುರೇಂದ್ರ, ಶಿವಮೂರ್ತಿ ಹಲವರು ಹಾಜರಿದ್ದರು. ಇದನ್ನೂ ಓದಿ: ಶೆಟ್ಟರ್ ರೀತಿ ಮಂತ್ರಿ ಸ್ಥಾನ ಬೇಡ ಎನ್ನಲ್ಲ: ಈಶ್ವರಪ್ಪ

 

ರಾಜುಗೌಡ ಅಭಿಮಾನಿಗಳಿಂದ ಪ್ರತಿಭಟನೆ: ಸುರಪುರ ಶಾಸಕ ರಾಜುಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಯಾದಗಿರಿಯಲ್ಲಿ ಶಾಸಕ ರಾಜುಗೌಡ ಅಭಿಮಾನಿ ಬಳಗವು ಪ್ರತಿಭಟನೆ ನಡೆಸಲಾಯಿತು. ನಗರದ ವಾಲ್ಮೀಕಿ ವೃತ್ತದಲ್ಲಿ ಬಳಗದ ಸದಸ್ಯರು ಸೇರಿ ಹಿಂದುಳಿದ ಜಿಲ್ಲೆ ಯಾದಗಿರಿ ಸಮಗ್ರ ಅಭಿವೃದ್ಧಿ ಗಾಗಿ ಶಾಸಕ ರಾಜುಗೌಡ ಅವರಿಗೆ ಸಚಿವ ಸ್ಥಾನ ನೀಡಿ ಯಾದಗಿರಿ ಜಿಲ್ಲೆಗೆ ಪ್ರಾಮುಖ್ಯತೆ ನೀಡಬೇಕೆಂದು ಬಿಜೆಪಿ ಹೈಕಮಾಂಡಗೆ ಒತ್ತಾಯ ಮಾಡಿದರು.

ಸಿಎಂ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರಾಜುಗೌಡ ಅವರಿಗೆ ಸೂಕ್ತ ಸಚಿವ ಸ್ಥಾನ ಒದಗಿಸಿ ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿಗೆ ಸಚಿವ ಸ್ಥಾನ ಒದಗಿಸಬೇಕು. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪ್ರತಿಭಟನೆ ನಿರತರು ಎಚ್ಚರಿಕೆ ನೀಡಿದರು.  ಇದನ್ನೂ ಓದಿ: ಡಿಸಿಎಂ ಪಟ್ಟಕ್ಕಾಗಿ ಮತ್ತೆ ಗಡೇ ದುರ್ಗಾದೇವಿ ಮೊರೆಹೋದ ಶ್ರೀರಾಮುಲು

Share This Article
Leave a Comment

Leave a Reply

Your email address will not be published. Required fields are marked *