ರಾಜ್ಯದಲ್ಲಿಂದು 3,979 ಕೊರೊನಾ ಪ್ರಕರಣ – 9,768 ಜನರು ಡಿಸ್ಚಾರ್ಜ್

Public TV
1 Min Read

– ಬೆಂಗಳೂರಿಗಿಂತ ಮೈಸೂರಿನಲ್ಲಿ ಮರಣ ಪ್ರಮಾಣ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿಂದು 3,979 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 9,768 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿಂದು 14 ಜನರು ಮೃತಪಟ್ಟರೆ, ಮೈಸೂರಿನಲ್ಲಿ 22 ಸಾವು ಆಗಿದೆ.

ಇಂದು ಕೊರೊನಾಗೆ 138 ಜನರು ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 34,425ಕ್ಕೆ ಏರಿಕೆಯಾಗಿದೆ. ಸದ್ಯ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಶೇಕಡಾವಾರು ಪ್ರಮಾಣ ಶೇ.3.46ಕ್ಕೆ ಇಳಿಕೆಯಾಗಿದೆ. ಜೊತೆಗೆ ಕೋವಿಡ್-19 ಸೋಂಕು ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.2.46ಕ್ಕೆ ಇಳಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 1,10,523 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇಂದು ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಎರಡು, ಡೆಲ್ಟಾ 318 ಪ್ರಕರಣಗಳು ವರದಿಯಾಗಿದೆ. ಒಟ್ಟು 1,61,287 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿಯೂ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಇಂದು 969 ಜನರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಇವತ್ತು 14 ಜನರು ಮೃತಪಟ್ಟಿದ್ದು, ಸದ್ಯ 67,036 ಸಕ್ರಿಯ ಪ್ರಕರಣಗಳಿವೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 7, ಬಳ್ಳಾರಿ 67, ಬೆಳಗಾವಿ 98, ಬೆಂಗಳೂರು ಗ್ರಾಮಾಂತರ 81, ಬೆಂಗಳೂರು ನಗರ 969, ಬೀದರ್ 18, ಚಾಮರಾಜನಗರ 64, ಚಿಕ್ಕಬಳ್ಳಾಪುರ 44, ಚಿಕ್ಕಮಗಳೂರು 110, ಚಿತ್ರದುರ್ಗ 33, ದಕ್ಷಿಣ ಕನ್ನಡ 498, ದಾವಣಗೆರೆ 118, ಧಾರವಾಡ 62, ಗದಗ 18, ಹಾಸನ 336, ಹಾವೇರಿ 28, ಕಲಬುರಗಿ 31, ಕೊಡಗು 115, ಕೋಲಾರ 103, ಕೊಪ್ಪಳ 18, ಮಂಡ್ಯ 137, ಮೈಸೂರು 404, ರಾಯಚೂರು 16, ರಾಮನಗರ 32, ಶಿವಮೊಗ್ಗ 206, ತುಮಕೂರು 128, ಉಡುಪಿ 123, ಉತ್ತರ ಕನ್ನಡ 104, ವಿಜಯಪುರ 4 ಮತ್ತು ಯಾದಗಿರಿಯಲ್ಲಿ 7 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Share This Article
Leave a Comment

Leave a Reply

Your email address will not be published. Required fields are marked *