ರಾಜ್ಯದಲ್ಲಿ ಕೊಡಗು ಜಿಲ್ಲೆ ಅಪಾಯದಲ್ಲಿದೆ: ಆರ್.ಅಶೋಕ್

Public TV
1 Min Read

– ಕೊಚ್ಚಿಹೋದ ಪಡುಬಿದ್ರೆ ಬೀಚ್
– 5 ಕೋಟಿ ಪರಿಹಾರ ಬಿಡುಗಡೆ

ಉಡುಪಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ಕೊಡಗು ಜಿಲ್ಲೆ ಅಪಾಯದಲ್ಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಜಿಲ್ಲೆಯಲ್ಲಿ ಅಲ್ಲಲ್ಲಿ ಕಡಲ್ಕೊರೆತ ಆಗಿದ್ದು, ಕಡಲ್ಕೊರೆತ ಸ್ಥಳಗಳನ್ನು ಭೇಟಿ ಮಾಡಿದ ಅಶೋಕ್ ಹಾನಿಯನ್ನು ಪರಿಶೀಲನೆ ನಡೆಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಜಗದೀಶ್ ಮತ್ತು ತಹಶೀಲ್ದಾರ್ ಅವರಿಂದ ಅನಾಹುತದ ಮಾಹಿತಿಗಳನ್ನು ಪಡೆದುಕೊಂಡರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಡುಪಿ ಜಿಲ್ಲೆಗೆ 5 ಕೋಟಿ ಬಿಡುಗಡೆ ಮಾಡಲಾಗಿದೆ. ಕಂದಾಯ ಇಲಾಖೆಯಲ್ಲಿ ವಿಪತ್ತು ನಿರ್ವಹಣೆಗೆ 300 ಕೋಟಿ ರೂಪಾಯಿಗಳು ಇದೆ. ಅವಶ್ಯಕತೆ ಆದ ತಕ್ಷಣ ಅದನ್ನು ಬಿಡುಗಡೆ ಮಾಡಲಾಗುವುದು. ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಮಳೆಯಿಂದ ಆದ ಅನಾಹುತಗಳು ವೀಕ್ಷಣೆಗೆ ಮಾಡಲಿದ್ದೇನೆ ಎಂದರು.

ರಾಜ್ಯದಲ್ಲಿ ಕೊಡಗು ಜಿಲ್ಲೆ ಅಪಾಯದಲ್ಲಿದೆ. ಅಲ್ಲಿಗೂ ಭೇಡಿ ಕೊಡುತ್ತೇನೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ಕಳೆದ ಬಾರಿಗಿಂತ ಈ ಬಾರಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತೇವೆ. ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ಯಾರು ಕೂಡ ರಜೆ ತೆಗೆದುಕೊಳ್ಳುವಂತಿಲ್ಲ ಎಂದು ಆದೇಶಿಸಿರುವುದಾಗಿ ಆರ್.ಅಶೋಕ್ ಕೇಳಿದರು.

ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ.ರವಿ ಜೊತೆ ಮಾತನಾಡುತ್ತೇನೆ. ಪಡುಬಿದ್ರೆ ಅಭಿವೃದ್ಧಿಯ ಬಗ್ಗೆ ಕಂದಾಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜೊತೆಯಾಗಿ ಕರ್ತವ್ಯ ನಿರ್ವಹಿಸಲಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *