ರಾಜ್ಯದಲ್ಲಿ ಕೊರೊನಾ ಮಹಾ ಸುನಾಮಿ- ಇವತ್ತು 2,738 ಮಂದಿಗೆ ಸೋಂಕು

Public TV
1 Min Read

-ಬೆಂಗಳೂರಿನಲ್ಲಿ 1,315 ಜನಕ್ಕೆ ಮಹಾಮಾರಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೊನಾ ಮಹಾಮಾರಿ 2,738 ಜನರ ದೇಹವನ್ನು ಸೇರಿದೆ. ಇತ್ತ ಸಿಲಿಕಾನ್ ಸಿಟಿಯೊಳಗೆ ಶರವೇಗದಲ್ಲಿ ಸಾಗುತ್ತಿರುವ ಕೊರೊನಾ 1,315 ಜನರಿಗೆ ತಗುಲಿದೆ. ಇಂದು ಒಂದೇ ದಿನ 73 ಸಾವಾಗಿದ್ದು, ಬೆಂಗಳೂರಿನಲ್ಲಿ 47 ಜನರನ್ನು ಕೊರೊನಾ ಬಲಿ ಪಡೆದುಕೊಂಡಿದೆ.

ಬೆಂಗಳೂರಿನಲ್ಲಿ ಸಾವಿನ ಸರಾಸರಿ ಶೇ.1.63 ಆಗಿದ್ದು, ರಾಜಧಾನಿಯಲ್ಲಿ 14,350 ಸಕ್ರಿಯ ಪ್ರಕರಣಗಳಿವೆ. ಇವತ್ತು ರಾಜ್ಯದಲ್ಲಿ 838 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಾವಿನ ಸರಾಸರಿ ಶೇ.1.82 ಆಗಿದ್ದು, ಐಸಿಯುನಲ್ಲಿ 545 ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 1315, ಯಾದಗಿರಿ 162, ಮೈಸೂರು 151, ದಕ್ಷಿಣ ಕನ್ನಡ 131, ಬಳ್ಳಾರಿ 106, ಕಲಬುರಗಿ 89, ವಿಜಯಪುರ 86, ಶಿವಮೊಗ್ಗ 74, ಧಾರವಾಡ 71, ಉಡುಪಿ 53, ತುಮಕೂರು 48, ರಾಯಚೂರು 45, ದಾವಣಗೆರೆ 45, ಚಿಕ್ಕಬಳ್ಳಾಪುರ 42, ಉತ್ತರ ಕನ್ನಡ 37, ಬಾಗಲಕೋಟೆ 37, ಕೊಪ್ಪಳ 31, ಮಂಡ್ಯ 30, ಕೊಡಗು 29, ಬೆಳಗಾವಿ 27, ಹಾಸನ 25, ಬೀದರ್ 23, ಬೆಂಗಳೂರು ಗ್ರಾಮಾಂತರ 21, ಕೋಲಾರ 21, ಚಿಕ್ಕಮಗಳೂರು 10, ಚಾಮರಾಜನಗರ 9, ಚಿತ್ರದುರ್ಗ 8, ಗದಗ ಮತ್ತು ಹಾವೇರಿಯಲ್ಲಿ ತಲಾ ಎರಡು ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 41,581ಕ್ಕೇರಿಕೆಯಾಗಿದ್ದು, 24,572 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 16,248 ಜನರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *