ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಅಭಾವ: ವಿಶ್ವನಾಥ್

Public TV
1 Min Read

ನೆಲಮಂಗಲ: ರಾಜ್ಯದಲ್ಲಿ ವ್ಯಾಕ್ಸಿನ್ ಸಾಕಷ್ಟು ಪ್ರಮಾಣದಲ್ಲಿ ಸರಬರಾಜು ಹಾಗುತ್ತಿಲ್ಲ. ಈ ಬಗ್ಗೆ ಆರೋಗ್ಯ ಸಚಿವರು ಕೇಂದ್ರದ ಸಚಿವರ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ ಎಂದು ಬಿಡಿಎ ಅಧ್ಯಕ್ಷ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಸತ್ಯವನ್ನ ಹೊರ ಹಾಕಿದ್ದಾರೆ.

ನೆಲಮಂಗಲ ಸಮೀಪದ ದಾಸನಪುರ ಹೋಬಳಿಯ ಗ್ರಾಮಸ್ಥರಿಗೆ ಅನುಕೂಲವಾಗಲಿ ಎಂದು ಎನ್.ಜಿ.ಓ ದವರ ಜೊತೆಗೂಡಿ ವ್ಯಾಕ್ಸಿನ್ ಅನ್ನು ನೀಡಲಾಗುತ್ತಿದೆ ಇಂದು 500 ಜನರಿಗೆ ವ್ಯಾಕ್ಸಿನ್ ನೀಡುವ ಉದ್ದೇಶವನ್ನು ಹೊಂದಿದ್ದೇವೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಸಲಹೆಗಾರ ಪ್ರಶಾಂತ್ ಸಹಕಾರದೊಂದಿಗೆ ವ್ಯಾಕ್ಸಿನ್ ವಿತರಣೆಯನ್ನು ಮಾಡಲಾಗುತ್ತಿದೆ ಎಂದರು.

ಕಳೆದ 15 ದಿನಗಳಿಂದ 3000 ಜನರಿಗೆ ವ್ಯಾಕ್ಸಿನ್ ವಿತರಣೆ ಮಾಡಲಾಗಿದೆ. ಹಾಗೆಯೇ ದಾಸನಪುರ ಹೋಬಳಿಯಲ್ಲಿ ಇಂದು ಮತ್ತು ನಾಳೆ 1500 ಜನರಿಗೆ ವ್ಯಾಕ್ಸಿನ್ ಮಾಡಲಾಗುತ್ತದೆ. ನಮ್ಮ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಸಾಕಷ್ಟು ಪ್ರಮಾಣದಲ್ಲಿ ಸರಬರಾಜು ಆಗುತ್ತಿಲ್ಲ. ಆದ್ದರಿಂದ ಅರೋಗ್ಯ ಸಚಿವರು ಕೇಂದ್ರದ ಸಚಿವರ ಜೊತೆಗೆ ಮಾತನಾಡುತ್ತಿದ್ದಾರೆ. ಜುಲೈ ಆಗಸ್ಟ್ ತಿಂಗಳ ಒಳಗಾಗಿ ಎಲ್ಲರಿಗೂ ಕೂಡ ಮೊದಲನೇ ಹಂತದ ಲಸಿಕೆ ಹಾಕಿಸಲಾಗುತ್ತದೆ ಎಂದು ತಿಳಿಸಿದರು.

ಎಲ್ಲರೂ ಕೂಡ ಸರ್ಕಾರದ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸಬೇಕು. ಅಂಕಿ-ಅಂಶಗಳ ಪ್ರಕಾರ ವ್ಯಾಕ್ಸಿನೇಷನ್ ಪಡೆದವರಲ್ಲಿ ಸಾವು-ನೋವುಗಳು ಆಗಿರುವುದಿಲ್ಲ. ಎಲ್ಲೋ ಕೆಲವರಿಗೆ ಜ್ವರ ಬಂದಿದೆ ಅಷ್ಟೇ. ಈಗಿನ ಪರಿಸ್ಥಿತಿಯಲ್ಲಿ ಪೂರ್ಣ ರೋಗ ಕಡಿಮೆ ಮಾಡುವ ಔಷಧಿ ಯಾವುದು ಬಂದಿರುವುದಿಲ್ಲ. ವ್ಯಾಕ್ಸಿನೇಷನ್ ಮಾಡಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *