ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಆರ್ಭಟ ತಗ್ಗಿದ್ದು, ಇಂದು 3,709 ಜನಕ್ಕೆ ಸೋಂಕು ತಗುಲಿದೆ. ಪ್ರಕರಣಗಳ ಸಂಖ್ಯೆ ಇಳಿಕೆಯಾದ್ರೂ ಮರಣ ಕೇಕೆ ಮುಂದುವರಿದಿದ್ದು, ಇಂದು 139 ಸೋಂಕಿತರು ಸಾವನ್ನಪ್ಪಿದ್ದಾರೆ.
8,111 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ 1,18,592 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ ರಾಜ್ಯದಲ್ಲಿ 28,15,029 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, 334,164 ಜನರು ಸಾವನ್ನಪ್ಪಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.2.87ಕ್ಕೆ ಇಳಿಕೆಯಾಗಿದೆ. ಮರಣ ಪ್ರಮಾಣ ಶೇ.3.74ರಷ್ಟಿದೆ. ಇತ್ತ ಕೊರೊನಾ ಪರೀಕ್ಷೆಯೂ ಇಳಿಕೆ ಕಂಡಿದ್ದು, 1,29,099 ಸ್ಯಾಂಪಲ್ ಗಳನ್ನು ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 803 ಜನಕ್ಕೆ ಕೊರೊನಾ ಸೋಂಕು ತಗುಲಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ನಗರದಲ್ಲಿ 69,344 ಸಕ್ರಿಯ ಪ್ರಕರಣಗಳಿವೆ. ಇಂದು ಬೆಂಗಳೂರಿನಲ್ಲಿ 1,745 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 7, ಬಳ್ಳಾರಿ 44, ಬೆಳಗಾವಿ 134, ಬೆಂಗಳೂರು ಗ್ರಾಮಾಂತರ 103, ಬೆಂಗಳೂರು ನಗರ 803, ಬೀದರ್ 6, ಚಾಮರಾಜನಗರ 52, ಚಿಕ್ಕಬಳ್ಳಾಪುರ 38, ಚಿಕ್ಕಮಗಳೂರು 163, ಚಿತ್ರದುರ್ಗ 77, ದಕ್ಷಿಣ ಕನ್ನಡ 374, ದಾವಣಗೆರೆ 90, ಧಾರವಾಡ 30, ಗದಗ 11, ಹಾಸನ 309, ಹಾವೇರಿ 13, ಕಲಬುರಗಿ 14, ಕೊಡಗು 161, ಕೋಲಾರ 65, ಕೊಪ್ಪಳ 25, ಮಂಡ್ಯ 124, ಮೈಸೂರು 486, ರಾಯಚೂರು 15, ರಾಮನಗರ 20, ಶಿವಮೊಗ್ಗ 169, ತುಮಕೂರು 144, ಉಡುಪಿ 81, ಉತ್ತರ ಕನ್ನಡ 114, ವಿಜಯಪುರ 16 ಮತ್ತು ಯಾದಗಿರಿಯಲ್ಲಿ 11 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.