ರಾಜ್ಯಾದ್ಯಂತ ಆಮ್ ಆದ್ಮಿ ಪಕ್ಷದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಭಾರೀ ಪ್ರತಿಭಟನೆ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 100 ರೂ.ಗಳಿಗೆ ತಲುಪಿರುವುದಕ್ಕೆ ವಿಷಾದ ಹಾಗೂ ವಿರೋಧ ವ್ಯಕ್ತಪಡಿಸಿ ರಾಜ್ಯಾದ್ಯಂತ ಇಂದು ಆಮ್ ಆದ್ಮಿ ಪಕ್ಷದಿಂದ ಹಲವು ಕಡೆ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರಾಮನಗರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಕಲಬುರಗಿ, ಯಾದಗಿರಿ, ಕೊಡಗು ಜಿಲ್ಲೆಗಳಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪೆಟ್ರೋಲ್ ಬಂಕ್ ಗಳ ಮುಂದೆ ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.

ಬೆಂಗಳೂರು ನಗರದಲ್ಲಿ ಸರ್ವಜ್ಞ ನಗರ, ಬೊಮ್ಮನಹಳ್ಳಿ, ಜಯನಗರ, ಸಿವಿ ರಾಮನ್ ನಗರ, ಮಹದೇವಪುರ, ಗಾಂಧಿನಗರ, ಚಿಕ್ಕಪೇಟೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ, ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರಗಳಲ್ಲಿ 62 ಪೆಟ್ರೋಲ್ ಬಂಕ್ ಗಳ ಮುಂದೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಜಮಾಯಿಸಿ ಕೇಂದ್ರ ಸರ್ಕಾರದ ನಡೆಯನ್ನು ಘೋಷಣೆ, ಭಿತ್ತಿಪತ್ರಗಳ ಪ್ರದರ್ಶನ ಹಾಗೂ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಭಟಿಸಲಾಯಿತು.

ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರೋಮಿ ಭಾಟಿ, ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ, ಮೋಹನ್ ದಾಸರಿ, ಶಾಂತಲಾ ದಾಮ್ಲೆ, ಜಗದೀಶ್ ವಿ. ಸದಂ, ನಂಜಪ್ಪ ಕಾಳೇಗೌಡ, ಬಿ ಟಿ ನಾಗಣ್ಣ, ಫಣಿರಾಜ್ ಸೇರಿದಂತೆ ಅನೇಕ ವಿಧಾನಸಭಾ ಅಧ್ಯಕ್ಷರುಗಳು ಹಾಗೂ ನೂರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.ಅಲ್ಲಲ್ಲಿ ಪೆಟ್ರೋಲ್ ಹಾಕಿಸಲು ಬರುತ್ತಿದ್ದ ಸಾರ್ವಜನಿಕರು ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಭಾರೀ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *