ರಾಜ್ಯ ಸಾರಿಗೆ ಬಸ್‍ಗಳ ನಡುವೆ ಅಪಘಾತ -ಐವರ ದುರ್ಮರಣ

Public TV
1 Min Read

ಅಮರಾವತಿ: ರಾಜ್ಯ ಸಾರಿಗೆ ಸಂಸ್ಥೆಗಳ ಎರಡು ಬಸ್‍ಗಳ ನಡುವೆ ಸಂಭವಿಸಿದ ಡಿಕ್ಕಿಯ ಪರಿಣಾಮ ಐವರು ಮೃತಪಟ್ಟು 30 ಕ್ಕೂ ಹೆಚ್ಚುಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಸುಂಕರಿ ಪೆಟಾದಲ್ಲಿ ನಡೆದಿದೆ.

ಸಾರಿಗೆ ಬಸ್‍ಗಳು ಒಟ್ಟೊಟ್ಟಿಗೆ ಚಲಿಸುತ್ತಿದ್ದ ವೇಳೆ ಹಿಂದುಗಡೆಯಿದ್ದ ಬಸ್ ಮುಂದೆ ಚಲಿಸುತ್ತಿದ್ದ ಬಸ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂದೆ ಬರುತ್ತಿದ್ದ ಟ್ರಕ್ ತನ್ನ ಮುಂದಿದ್ದ ಬಸ್‍ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 2 ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಹೆಚ್ಚಿನ ಪ್ರಯಾಣಿಕರಿಗೆ ಗಾಯಗಳಾಗಿವೆ.

ಬಸ್‍ಗಳ ನಡುವೆ ಅಪಘಾತಕ್ಕೆ ರಸ್ತೆಯ ಬದಿಯಲ್ಲಿದ್ದ ತ್ಯಾಜ್ಯಕ್ಕೆ ಬೆಂಕಿ ಕೊಟ್ಟಿದ್ದ ಕಾರಣ ಹೊಗೆ ರಸ್ತೆ ತುಂಬಾ ಹಬ್ಬಿದ್ದರಿಂದಾಗಿ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಘಟನೆ ನಡೆದ ತಕ್ಷಣ ಅಂಬ್ಯುಲೆನ್ಸ್, ಪೊಲೀಸರು ಮತ್ತು ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *