ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ಅಂಜನಾದ್ರಿ ಬೆಟ್ಟದ ಕಲ್ಲು ಬಳಕೆ

Public TV
1 Min Read

ಬಳ್ಳಾರಿ: ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ಅಂಜನಾದ್ರಿ ಬೆಟ್ಟದ ಕಲ್ಲು ಬಳಕೆ ಮಾಡಲಾಗುತ್ತದೆ ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ಕೆರೆಯ ಎಚ್‍ಎಲ್‍ಸಿ ಕಾಲುವೆಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಶಾಸಕರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿರೋದು ನಮಗೆಲ್ಲ ಖುಷಿ ತಂದಿದೆ. ಅಂಜನಾದ್ರಿ ಬೆಟ್ಟದಲ್ಲಿ ವಾಯು, ಸುಗ್ರೀವ, ರಾಮನೂ ಕೂಡ ನೆಲೆಸಿದ್ದ ಎಂಬ ಪ್ರತೀತಿಯಿದೆ. ಹೀಗಾಗಿ ಅಲ್ಲಿಂದ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಒಂದು ಕಲ್ಲನ್ನು ಒಯ್ಯಲಾಗಿದೆ. ರಾಮಮಂದಿರದಲ್ಲೂ ಕೂಡ ಅಂಜನಾದ್ರಿ ಬೆಟ್ಟದ ಕಲ್ಲನ್ನು ನಾವು ನೋಡಬಹುದಾಗಿದೆ ಎಂದರು.

ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿರುವ ವಿಚಾರ ನಿನ್ನೆ ಗೊತ್ತಾಯ್ತು. ವಿಷಯ ಕೇಳಿ ತುಂಬಾ ನೋವಾಯ್ತು. ಮುಖ್ಯಮಂತ್ರಿಗಳು ಆದಷ್ಟು ಬೇಗ ಗುಣಮುಖರಾಗಿ ಬರಬೇಕು. ಈ ನಾಡಿಗೆ ಅವರ ಸೇವೆ ಅತ್ಯಗತ್ಯವಾಗಿದೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಆರೋಗ್ಯ ಮಾತೆಯಲ್ಲಿ ಪ್ರಾರ್ಥಿಸುವುದಾಗಿ ಎಂದು ಸೋಮಶೇಖರ್ ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *