ರಾಮಮಂದಿರ ಶಿಲಾನ್ಯಾಸಕ್ಕೆ ಉಡುಪಿಯ ನೀರು, ಮಣ್ಣು ರವಾನೆ

Public TV
1 Min Read

-ವಿಹಿಂಪಗೆ ದೇಶಾದ್ಯಂತ ಮೃತ್ತಿಕೆ- ಜಲ ಸಂಗ್ರಹ ಜವಾಬ್ದಾರಿ

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸಕ್ಕೆ ದಿನಗಣನೆ ಆರಂಭವಾಗಿದೆ. ಮಂದಿರ ಶಿಲಾನ್ಯಾಸದ ಪ್ರಕ್ರಿಯೆಗಳು ದೇಶದಾದ್ಯಂತ ಚುರುಕಿನಿಂದ ಆಗುತ್ತಿದೆ. ಆಗಸ್ಟ್ 5ರಂದು ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯಲಿದ್ದು, ಶಿಲಾನ್ಯಾಸದ ಸಂದರ್ಭ ದೇಶದ ಪವಿತ್ರ ಕ್ಷೇತ್ರಗಳ ಮಣ್ಣು ಮತ್ತು ನೀರು ಬಳಸಲಾಗುತ್ತದೆ.

ರಾಮಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ದೇಶದ ಪವಿತ್ರ ಕ್ಷೇತ್ರಗಳಿಂದ ಮಣ್ಣು ಮತ್ತು ಪವಿತ್ರ ನದಿಗಳಿಂದ ನೀರು ಸಂಗ್ರಹ ಪ್ರಕ್ರಿಯೆ ನಡೆಯುತ್ತಿದೆ. ವಿಶ್ವ ಹಿಂದೂ ಪರಿಷತ್‍ನಿಂದ ನೀರು, ಮಣ್ಣು ಸಂಗ್ರಹ ಪ್ರಕ್ರಿಯೆ ಆರಂಭಗೊಂಡಿದೆ. ಉಡುಪಿಯ ಪವಿತ್ರ ಮಣ್ಣಿಗೆ ಅದಮಾರು ಈಶಪ್ರಿಯ ಶ್ರೀಗಳು ಪೂಜೆ ಸಲ್ಲಿಸಿ, ಕೃಷ್ಣನ ಗಂಧ ಪ್ರಸಾದ ಅರ್ಪಿಸಿ ಪ್ರಾರ್ಥಿಸಿದರು.

ರಾಮಮಂದಿರ ನಿರ್ಮಾಣ ನಿರ್ವಿಘ್ನವಾಗಲಿ. ವಿಶ್ವದಾದ್ಯಂತ ಇರುವ ಕೋಟ್ಯಂತರ ಹಿಂದೂ ಭಕ್ತರ ಕನಸು ನನಸಾಗಲಿ ಎಂದು ಪ್ರಾರ್ಥಿಸಿದರು. ಉಡುಪಿಯ ಪವಿತ್ರ ನೀರು ಮತ್ತು ಮಣ್ಣನ್ನು ಕೃಷ್ಣ ಮಠದ ಗರ್ಭಗುಡಿಯ ಮುಂಭಾಗ ಇಟ್ಟು ಪರ್ಯಾಯ ಸ್ವಾಮೀಜಿಯವರು ವಿಶೇಷ ಪೂಜೆ ನೆರವೇರಿಸಿದರು.

ಸಂಗ್ರಹಿಸಿ ಪೂಜಿಸಿದ ಮಣ್ಣು ನೀರನ್ನು ಅನಂತೇಶ್ವರ ಮತ್ತು ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿನ ಗಂಧ ಪ್ರಸಾದವನ್ನು ಇಟ್ಟು ಶ್ರೀಗಳು ವಿಶ್ವ ಹಿಂದೂ ಪರಿಷತ್ ಮುಖಂಡರಿಗೆ ಸ್ವಾಮೀಜಿ ಹಸ್ತಾಂತರಿಸಿದರು. ಆಗಸ್ಟ್ 5ರಂದು ನಡೆಯುವ ಮಂದಿರ ಶಿಲಾನ್ಯಾಸ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ದೇಶದ ಪವಿತ್ರ ಪ್ರಸಿದ್ಧ ಕ್ಷೇತ್ರಗಳಿಂದ ಬಂದ ನೀರು ಮತ್ತು ಮಣ್ಣನ್ನು ಶಿಲಾನ್ಯಾಸ ಸಂದರ್ಭ ಬಳಸಲಾಗುತ್ತದೆ.

Share This Article
Leave a Comment

Leave a Reply

Your email address will not be published. Required fields are marked *