ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆ – ಮನೆಗಳಿಗೆ ನೀರು ನುಗ್ಗಿ ಅವಾಂತರ

Public TV
1 Min Read

ರಾಯಚೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆ ಹಲವೆಡೆ ಅವಾಂತರ ಸೃಷ್ಟಿಸಿದೆ. ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.

ಪಟ್ಟಣದ ಗಾಂಧಿನಗರದಲ್ಲಿ ರಾಜಕಾಲುವೆ ನೀರು ನೇರವಾಗಿ ಮನೆಗಳಿಗೆ ನುಗ್ಗಿದೆ. ನೀರು ಹೊರಹಾಕಲು ನಿವಾಸಿಗಳು ರಾತ್ರಿಯೆಲ್ಲಾ ಜಾಗರಣೆ ಮಾಡಿದ್ದಾರೆ. ಮನೆ ಹೊರಗಡೆ ನಿಲ್ಲಿಸಿದ್ದ ಬೈಕ್, ಕಾರುಗಳು ನೀರಿನಲ್ಲಿ ಮುಳುಗಡೆಯಾಗಿವೆ. ಮನೆಯಲ್ಲಿನ ದವಸ ಧಾನ್ಯಗಳು ನೀರುಪಾಲಾಗಿವೆ. ನಿರಂತರ ಮಳೆಗೆ ಮನೆಯ ಗೋಡೆಗಳು ಕುಸಿದು ಬಿದ್ದಿವೆ. ರಾತ್ರಿಯಿಡಿ ಬಿಡುವು ನೀಡದೇ ಸುರಿದ ಧಾರಾಕಾರ ಮಳೆಗೆ ಮಸ್ಕಿ ಪಟ್ಟಣದ ಜನ ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯಾದ್ಯಂತ ಮಳೆ ಇಂದು ಕೂಡ ಮುಂದುವರೆದಿದೆ. ಇದನ್ನೂ ಓದಿ: ಕೊಲೆ ಆರೋಪಿ ಯುವತಿ ಮೇಲೆ ಮಾರಣಾಂತಿಕ ಹಲ್ಲೆ

ಮಳೆ ಹಾಗೂ ವೀಕೆಂಡ್ ಕರ್ಫ್ಯೂ ನಡುವೆಯೂ ರಾಯಚೂರು ನಗರದಲ್ಲಿ ತರಕಾರಿ, ಹಣ್ಣು, ಹೂ ವ್ಯಾಪಾರ ನಡೆದಿದೆ. ನಗರದ ಹಲವೆಡೆ ಮಳೆಯಲ್ಲೇ ಮಹಿಳೆಯರು ತರಕಾರಿ ವ್ಯಾಪಾರ ನಡೆಸಿದ್ದಾರೆ. ಮಳೆ ಜೋರಾಗಿ ಸುರಿಯುತ್ತಿರುವುದರಿಂದಾಗಿ ಜನರ ಓಡಾಟಕ್ಕೆ ಬ್ರೇಕ್ ಬಿದ್ದಂತಾಗಿದೆ.

Share This Article
Leave a Comment

Leave a Reply

Your email address will not be published. Required fields are marked *