ರಾಯಭಾರಿಯಾಗಿ ದರ್ಶನ್ ನೇಮಕ – ಕೃಷಿ ಇಲಾಖೆಯಿಂದ ಅಧಿಕೃತ ಆದೇಶ

Public TV
1 Min Read

ಬೆಂಗಳೂರು: ರಾಜ್ಯ ಕೃಷಿ ಇಲಾಖೆಯ ರಾಯಭಾರಿಯಾಗಿ ನಟ ದರ್ಶನ್ ನೇಮಕದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.

ಜನವರಿ 25ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜ್ಯ ಸರ್ಕಾರದರ ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕವಾಗಿದ್ದಾರೆ ಎಂದು ಕೃಷಿ ಸಚಿವರಾದ ಬಿ.ಸಿ ಪಾಟೀಲ್ ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದರು. ಎರಡು ವರ್ಷಗಳ ಹಿಂದೆ ಅರಣ್ಯ ಇಲಾಖೆಯ ವನ್ಯಜೀವಿ ಹಾಗೂ ಅರಣ್ಯ ಸಂರಕ್ಷಿಸುವ ಸಂದೇಶ ಸಾರುವ ರಾಯಭಾರಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು. ಕಾಡಿದ್ದರೆ ನಾಡು ವನವಿದ್ದರೆ ಜೀವನ ಎಂದು ಸಾರಿದ್ದರು. ಇದೀಗ ನೇಗಿಲಯೋಗಿ ಪರ ನಿಂತು ಪ್ರೋತ್ಸಾಹ ನೀಡುವ ಕೆಲಸಕ್ಕೆ ಮುಂದಾಗಿದ್ದಾರೆ.

ಕೃಷಿ ಇಲಾಖೆಯ ಕಾರ್ಯಕ್ರಮಗಳ ಪ್ರಚಾರ ಮತ್ತು ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಲ್ಲಿ ದರ್ಶನ್ ಭಾಗಿಯಾಗಲಿದ್ದಾರೆ. ದರ್ಶನ್ ಯಾವುದೇ ಸಂಭಾವನೆ ಪಡೆಯದೇ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *