ರೋಷನ್ ಬೇಗ್‍ಗೆ ಜಾಮೀನು – ಪರಪ್ಪನ ಅಗ್ರಹಾರದತ್ತ ಬೆಂಬಲಿಗರು

Public TV
1 Min Read

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

2018 ರ ಆರೋಪಕ್ಕೆ ಈಗ ರೋಷನ್ ಬೇಗ್ ಅವರನ್ನ ಬಂಧಿಸಲಾಗಿದೆ. ಕಕ್ಷಿದಾರರು ಸಿಬಿಐ ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದಾರೆ. ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಹುರುಳಿಲ್ಲ. ಈಗಾಗಲೇ 36ರ ಪೈಕಿ 35 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಕಕ್ಷಿದಾರರು ಅನಾರೋಗ್ಯದಿಂದ ಬಳಲುತ್ತಿದ್ದ, ಜಾಮೀನು ನೀಡುವಂತೆ ಬೇಗ್ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು. ವಾದ -ಪ್ರತಿವಾದ ಆಲಿಸಿದ್ದ ನ್ಯಾಯಾಲಯ ಇಂದು ಆದೇಶ ಕಾಯ್ದಿರಿಸಿತ್ತು.

ರೋಷನ್ ಬೇಗ್ ಜಾಮೀನು ಹಿನ್ನೆಲೆ ಅವರ ಬೆಂಬಲಿಗರು ಪರಪ್ಪನ ಅಗ್ರಹಾರದತ್ತ ಆಗಮಿಸುತ್ತಿದ್ದಾರೆ. ಇಂದು ಸಂಜೆ 6 ರಿಂದ 7 ಗಂಟೆಯ ಅವಧಿಯಲ್ಲಿ ರೋಷನ್ ಬೇಗ್ ಜಜೈಲಿನಿಂದ ಹೊರ ಬರಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರ ಆಗಮನ ಹಿನ್ನೆಲೆ ಪರಪ್ಪನ ಅಗ್ರಹಾರ ಪೊಲೀಸರಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ನವೆಂಬರ್ 22ರಂದು ರೋಷನ್ ಬೇಗ್ ಅವರ ಬಂಧನವಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *