ಲಾಕ್‍ಡೌನ್: ಗಣಿನಾಡಿನಿಂದ ಹೊರಟ 13,671 ಮಂದಿ ಪ್ರವಾಸಿ ಕಾರ್ಮಿಕರು

Public TV
1 Min Read

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಿಂದ ಹೊರ ರಾಜ್ಯಕ್ಕೆ ಹೊರಡಲು ಪ್ರವಾಸಿ ಕಾರ್ಮಿಕರು ತಯಾರಾಗಿದ್ದು, ಒಟ್ಟು 13,671 ಕಾರ್ಮಿಕರನ್ನು ಹೊರ ರಾಜ್ಯಕ್ಕೆ ಕಳಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಪ್ರತಿಯೊಬ್ಬ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿ ಹೊಸಪೇಟೆಯಿಂದ ಮೇ 17 ರಂದು ತೆರಳಲಿರುವ ಎರಡು ವಿಶೇಷ ರೈಲಿನಲ್ಲಿ ಕಾರ್ಮಿಕರನ್ನು ಕಳಿಸಿ ಕೊಡಲಿದೆ. ಬಹುತೇಕ ಕಾರ್ಮಿಕರು, ಬಳ್ಳಾರಿ ಸಂಡೂರು ಹೊಸಪೇಟೆ ಸೇರಿದಂತೆ ಜಿಲ್ಲೆಯಲ್ಲಿ ಇರುವ ಗಣಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಬಳ್ಳಾರಿ ಹೊಸ ಬಸ್ ನಿಲ್ದಾಣ ಹಾಗೂ ಸಂಡೂರು ಹೊಸಪೇಟೆಯಲ್ಲಿ ಕಾರ್ಮಿಕರ ಸ್ಕ್ರೀನಿಂಗ್ ನಡೆಯುತ್ತಲಿದೆ.

ಪ್ರತಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿದ ಬಳಿಕ ಜಿಲ್ಲಾಡಳಿತ ಆರೋಗ್ಯ ಕಾರ್ಡ್ ನೀಡಲಿದ್ದು, ಆರೋಗ್ಯ ಕಾರ್ಡ್ ಹೊಂದಿದವರು ಟಿಕೆಟ್ ಪಡೆದು ಪ್ರಯಾಣ ಮಾಡಬಹುದಾಗಿದೆ. ಉಳಿದಂತೆ ಪಕ್ಕದ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರಕ್ಕೆ ಬಸ್‍ನಲ್ಲಿ ಸಂಚಾರ ಮಾಡುವ ಮನಸ್ಸು ಇದ್ದವರನ್ನು ಬಸ್‍ನಲ್ಲಿ ಕಳುಹಿಸಿ ಕೊಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಈವರೆಗೂ ಯಾರು ರಾಜ್ಯ ಸರ್ಕಾರದ ಸೇವಾ ಸಿಂಧು ವೆಬ್ ಸೈಟ್‍ನಲ್ಲಿ ಹೆಸರು ನೋಂದಾಯಿಸಿದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಬೇರೆ ಬೇರೆ ರಾಜ್ಯದ ಒಟ್ಟು 13,671 ಜನ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಸಿದ್ದರೆ. ಉತ್ತರ ಪ್ರದೇಶದ ಸುಮಾರು 3,300 ಕಾರ್ಮಿಕರು ನೋಂದಣಿ ಮಾಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *