ಲಾಕ್‍ಡೌನ್, ಬೇಸರ ಕಳೆಯಲು ಮೀನು ಹಿಡಿಯಲು ತೆರಳಿದ ಇಬ್ಬರೂ ನೀರುಪಾಲು

Public TV
1 Min Read

ಕಾರವಾರ: ಲಾಕ್‍ಡೌನ್ ನಲ್ಲಿ ಬೇಸರ ಕಳೆಯಲೆಂದು ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಆಘಾತಕಾರಿ ಘಟನೆ ಅಂಕೋಲಾ ತಾಲೂಕಿನ ಬಸಾಕಲ್ ಗುಡ್ಡದ ಸಮೀಪ ನಡೆದಿದೆ.

ಅಂಕೋಲಾದ ಬೆಳಾಬಂದರ್ ನಿವಾಸಿ ಸಂದೀಪ ಬೀರಪ್ಪ ನಾಯ್ಕ (30), ಚೇತನ ನಾಗೇಶ ನಾಯ್ಕ (23) ನೀರುಪಾಲಾದವರಾಗಿದ್ದು, ಸಂದೀಪ ನಾಯ್ಕ ಮೃತ ದೇಹ ಪತ್ತೆಯಾಗಿದೆ. ನಾಪತ್ತೆಯಾದ ಇನ್ನೋರ್ವನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲಿದ್ದು ಬೇಸರಗೊಂಡಿದ್ದ ಇಬ್ಬರು ಯುವಕರು ಮೀನು ಹಿಡಿಯಲೆಂದು ಬಸಾಕಲ್ ಸಮೀಪ ಸಮುದ್ರಕ್ಕೆ ತೆರಳಿದ್ದರು. ಆದರೆ ಈ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದ್ದು, ಇನ್ನಷ್ಟೆ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಇನ್ನೊರ್ವನಿಗೆ ಹುಡುಕಾಟ ನಡೆಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *