ವರದಾ ನದಿಯ ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಾಡಿ ಯುವಕನ ಹುಚ್ಚಾಟ

Public TV
1 Min Read

ಹಾವೇರಿ: ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದರೂ ಕೂಡ ಕಾರವಾರ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದರಿಂದ ವರದಾ ನದಿಯ ನೀರಿನ ಪ್ರಮಾಣ ಕಡಿಮೆಯಾಗಿಲ್ಲ. ಈ ನಡುವೆ ಭರಪೂರ ತುಂಬಿ ಹರಿಯುತ್ತಿರುವ ವರದಾ ನದಿ ನೀರಿನಲ್ಲಿ ಯುವಕನೋರ್ವ ಈಜಾಡಿ ಹುಚ್ಚಾಟ ಪ್ರದರ್ಶಿಸಿದ್ದಾನೆ.

ಹಾವೇರಿ ತಾಲೂಕಿನ ಹೊಸರಿತ್ತಿ ಗ್ರಾಮದ ಬಳಿ ವರದಾ ನದಿಯ ಬ್ರಿಡ್ಜ್ ಮೇಲಿನಿಂದ ಯುವಕನೋರ್ವ ಜಿಗಿದು ಭರಪೂರ ಹರಿಯೋ ನೀರಿನಲ್ಲಿ ಈಜಾಡಿ ಹುಚ್ಚಾಟ ಮೆರೆದಿದ್ದಾನೆ. ಸ್ಥಳೀಯರಿಗೆ ಈಗಾಗಲೇ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದರೂ ಕೂಡ ಯುವಕರ ಈ ವರ್ತನೆ ಕಂಡು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವರದಾ ನದಿ ಪ್ರವಾಹದಲ್ಲಿ ವಾನರಸೇನೆ ಸಿಲುಕಿ ಪರದಾಟ

ಯುವಕ ನದಿಯಲ್ಲಿ ಈಜಾಡುತ್ತಿರುವ ವೀಡಿಯೋ ಮಾಡಿರುವ ಸ್ಥಳೀಯರು ಸಾಮಾಜಿಕ ಜಾಲತಾನದಲ್ಲಿ ಹರಿಬಿಟ್ಟಿದ್ದಾರೆ. ಬ್ರಿಡ್ಜ್ ಮೇಲಿನಿಂದ ಜಿಗಿದು ಈಜಿಕೊಂಡು ಬಂದ ಯುವಕ ಕೊನೆಯಲ್ಲಿ ಧೀರೇಂದ್ರ ಮಠದ ಹತ್ತಿರ ದಡ ಸೇರಿದ್ದಾನೆ. ನೀರಿನ ಸೆಳೆತ ಹೆಚ್ಚಾಗಿರುವುದರಿಂದ ಅಪಾಯ ಸಂಭವಿಸುವ ಸಾಧ್ಯತೆಯ ಬಗ್ಗೆ ಜಿಲ್ಲಾಡಳಿತ ಸ್ಥಳೀಯ ಯುವಕರಲ್ಲಿ ಹಲವು ಬಾರಿ ಎಚ್ಚರಿಕೆ ನೀಡಿದೆ ಆದರು ಯುವಕರು ಮಾತ್ರ ತಮ್ಮ ಹುಚ್ಚಾಟ ಕೊನೆಗೊಳಿಸುತ್ತಿಲ್ಲ.

Share This Article
Leave a Comment

Leave a Reply

Your email address will not be published. Required fields are marked *