ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ: ಈಶ್ವರ್ ಖಂಡ್ರೆ

Public TV
1 Min Read

ರಾಯಚೂರು: ಶಿರಾ, ಆರ್.ಆರ್.ನಗರ ವಿಧಾನಸಭಾ ಉಪ ಚುನಾವಣಾ ಹಿನ್ನೆಲೆ ಡಿ.ಕೆ ಶಿವಕುಮಾರ್ ಮನೆ ಮೇಲೆ ಉದ್ದೇಶಪೂರ್ವಕವಾಗಿ ಸಿಬಿಐ ರೇಡ್ ಮಾಡಲಾಗಿದೆ ಅಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆರೋಗ್ಯ ಹಸ್ತ ಕಾರ್ಯಕ್ರಮ ಉದ್ಘಾಟಿಸಿ ಬಳಿಕ ಮಾತನಾಡಿದ ಖಂಡ್ರೆ, ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಜಿಜೆಪಿ ತಂತ್ರ ರೂಪಿಸಿದೆ. ಸಿಬಿಐ ಬಿಜೆಪಿ ಪಕ್ಷದ ಏಜೆಂಟ್ ರೀತಿಯಲ್ಲಿ ಕೆಲಸ ಮಾಡುತ್ತಿದೆ. ಸಿಬಿಐ ಕೇದ್ರ ಸರ್ಕಾರದ ಪಂಜರದ ಗಿಣಿಯಾಗಿದೆ ಎಂದರು.

ಕೇಂದ್ರ ಸರ್ಕಾರ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ನಿಂದ ಯಾವುದೇ ಕಾರ್ಯಕ್ರಮ ಜಾರಿಯಾಗಿಲ್ಲ ಅಂತ ಆರೋಪಿಸಿದರು. ಹತ್ರಾಸ್ ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವಾಗಿ ಕೊಲೆಯಾಗಿದೆ. ಯುಪಿ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಬೇಕಿತ್ತು. ಆದ್ರೆ ಯೋಗಿ ಸರ್ಕಾರವು ಆರೋಪಿಗಳಿಗೆ ಸಮರ್ಥನೆ ಮಾಡುವ ರೀತಿ ವರ್ತನೆ ಮಾಡಿದ್ದಾರೆ. ಯುಪಿ ಸರ್ಕಾರದ ವಕ್ತಾರರು ಅತ್ಯಾಚಾರವಾಗಿಲ್ಲ ಅಂತ ಹೇಳುತ್ತಾರೆ. ಯುಪಿ ಸರ್ಕಾರ ಜಂಗಲ ರಾಜ್ಯ ನಡೆಸುತ್ತಿದೆ. ಇವರಿಗೆ ನೈತಿಕತೆ, ಮಾನ ಮಾರ್ಯಾದೆ, ಸಂವಿಧಾನದ ಮೇಲೆ ನಂಬಿಕೆ ಇದೆಯೇ ಅಂತ ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಮೇಲೆ ಪುರುಷ ಪೊಲೀಸ್ ಪೇದೆ ಹಲ್ಲೆ ಮಾಡಿದ್ದಾರೆ. ಇಲ್ಲಿ ಕಾನೂನು ಇದೆಯೇ? ಆರೋಪಿಗಳಿಗೆ ಕಠಿಣವಾದ ಶಿಕ್ಷೆಯಾಗಬೇಕು. ಯೋಗಿ ಸರ್ಕಾರಕ್ಕೆ ಆಡಳಿತ ಮಾಡಲು ಅರ್ಹತೆ ಇಲ್ಲ, ವಜಾಗೊಳಿಸಬೇಕು. ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಅಂತ ಖಂಡ್ರೆ ಒತ್ತಾಯಿಸಿದರು.

ಶಿರಾ ಹಾಗೂ ಆರ್ ಆರ್ ನಗರ ಎರಡೂ ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ ಅಂತ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಮಸ್ಕಿ ಕ್ಷೇತ್ರ ಅಭಿವೃದ್ಧಿ ಆಗಿದೆ. ಮಸ್ಕಿ ವಿಧಾನಸಭಾ ಉಪ ಚುನಾವಣೆಗೆ ಐದಾರು ಜನ ಆಕಾಂಕ್ಷಿಗಳಿದ್ದಾರೆ. ಮಸ್ಕಿಗೆ ಗೆಲ್ಲುವ ಅಭ್ಯರ್ಥಿಯನ್ನು ನಿಲ್ಲಿಸಲಿದ್ದೇವೆ ಅಂತ ಈಶ್ವರ ಖಂಡ್ರೆ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *