ವಿಜಯಪುರದಲ್ಲಿ ಗಾಳಿಯಲ್ಲಿ ಗುಂಡು

Public TV
1 Min Read

ವಿಜಯಪುರ: ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಾಡಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ನಡೆದಿದೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುದ್ದೇಬಿಹಾಳ ತಾಲೂಕಿನ ಬಸರಕೋಡದ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದವರು. ಕಾರ ಹುಣ್ಣಿಮೆ ನಿಮಿತ್ತ ಗ್ರಾಮದಲ್ಲಿ ಕರಿ ಹರಿಯುವ ಮುನ್ನ ಈ ಘಟನೆ ನಡೆದಿದೆ.

ಅನುಮತಿ ಪಡೆದ ಬಂದೂಕಿನಿಂದ ಗುಂಡು ಹಾರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಸುರಕ್ಷಿತ ಸ್ಥಳದಲ್ಲಿ ಗುಂಡು ಹಾರಿಸದೇ ಜನರ ಗುಂಪಿ ನಡುವೆ ಗಾಳಿಯಲ್ಲಿ ಗುಂಡು ಹಾರಿಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಸಂಪ್ರದಾಯದಂತೆ ಗ್ರಾಮೀಣ ಪ್ರದೇಶಗಳಲ್ಲಿ ಗೌಡಕಿ ಮನೆತನಗಳಲ್ಲಿ ಈ ರೀತಿ ಗುಂಡು ಹಾರಿಸುವ ಪದ್ಧತಿ ಇದೆ. ಆದರೆ ಗ್ರಾಮ ಪಂಚಾಯಿತಿ ಕಟ್ಟಡದ ಮುಂದೆಯೇ ಜನನಿಬಿಡ ಪ್ರದೇಶದಲ್ಲಿ ಗುಂಡು ಹಾರಿಸಿರುವುದಕ್ಕೆ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ. ಸುತ್ತ ಜನರನ್ನು ನಿಲ್ಲಿಸಿಕೊಂಡು ಗುಂಡು ಹಾರಿಸಿರುವ ಕುರಿತು ವಿರೋಧ ವ್ಯಕ್ತವಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *