ವಿದ್ಯುತ್ ತಂತಿ ತುಳಿದು ರೈತ ಸಾವು

Public TV
0 Min Read

ಮಂಡ್ಯ: ವಿದ್ಯುತ್ ತಂತಿ ತುಳಿದು ರೈತ ಸಾವನ್ನಪ್ಪಿದರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೆಂಚಭೋವಿದೊಡ್ಡಿ ಗ್ರಾಮದಲ್ಲಿ ಜರುಗಿದೆ.

ಕೆಂಚಭೋವಿದೊಡ್ಡಿ ಗ್ರಾಮದ ರೈತ ಪುಟ್ಟೇಗೌಡ ಮೃತ ದುರ್ದೈವಿ. ಪುಟ್ಟೇಗೌಡ ಅವರು ಎಂದಿನಂತೆ ಬೆಳಗ್ಗೆ ಜಮೀನಿಗೆ ನೀರು ಹಾಯಿಸಲು ತೆರಳಿದ್ದಾರೆ. ಈ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಕಾರಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅವಘಡ ಸಂಭವಿಸಿದೆ, ಪರಿಹಾರ ನೀಡಬೇಕೆಂದು ಆಗ್ರಹಪಡಿಸಿದ್ದಾರೆ. ಹಲಗೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.

Share This Article
Leave a Comment

Leave a Reply

Your email address will not be published. Required fields are marked *