ವಿಷಕಾರಿ ರಾಸಾಯನಿಕ ಸೋರಿಕೆ ಸಿಬ್ಬಂದಿ ಸಾವು – ಮೂವರು ಅಸ್ವಸ್ಥ

Public TV
1 Min Read

ರಾಯಚೂರು: ನಗರದ ಹೊರವಲಯದ ವಡ್ಲೂರ್ ಕ್ರಾಸ್ ಬಳಿಯ ಫಾರ್ಮಾ ಕಂಪನಿಯೊಂದರಲ್ಲಿ ವಿಷಕಾರಿ ರಾಸಾಯನಿಕ ಸೋರಿಕೆಯಿಂದ ಓರ್ವ ಸಿಬ್ಬಂದಿ ಸಾವನ್ನಪ್ಪಿದ್ದಾನೆ. ರಾಯಚೂರು ಲ್ಯಾಬರೋಟಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ದುರ್ಘಟನೆ ನಡೆದಿದೆ. ಲಕ್ಷ್ಮಣ್ (28) ಕಂಪನಿಯ ಕೆಮಿಸ್ಟ್ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಒಟ್ಟು ನಾಲ್ಕು ಜನ ಅಸ್ವಸ್ಥರಾಗಿ ಒರ್ವ ಸಾವನ್ನಪ್ಪಿದ್ದಾರೆ. ಇನ್ನೊರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೂ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನ ರಿಮ್ಸ್ ಆಸ್ಪತ್ರೆಯಲ್ಲಿ ಇಡಲಾಗಿದೆ. ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಐದು ತಿಂಗಳ ಹಿಂದೆ ಲಕ್ಷ್ಮಣ್ ಮದುವೆಯಾಗಿದ್ದರು.

ಸಿಪಿಪಿ (ಕ್ಲೋರಿನೇಟೆಡ್ ಪಾಲಿಪ್ರೋಪೈಲೇನ್) ರಾಸಾಯನಿಕ ಮಾನವನ ಶ್ವಾಸಕೋಶಕ್ಕೆ ದುಷ್ಪರಿಣಾಮ ಬೀರುತ್ತದೆ. ಕೆಮಿಕಲ್ ಲಕ್ಷ್ಮಣ್ ದೇಹ ಸೇರಿದ್ದರಿಂದ ಉಸಿರಾಟ ತೊಂದರೆಯಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನುಳಿದ ಮೂವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *