ವೇಷಭೂಷಣ ತೊಟ್ಟು ಬೆಣ್ಣೆ ನಗರಿ ಯುವಕರಿಂದ ಕೊರೊನಾ ಜಾಗೃತಿ

Public TV
1 Min Read

ದಾವಣಗೆರೆ: ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಕೊರೊನಾದಿಂದ ದೂರವಿರಲು ಹಲವರು ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಆದರೆ ಬೆಣ್ಣೆ ನಗರಿ ದಾವಣಗೆರೆಯ ಯುವಕರು ಜನರಿಗೆ ಕೊರೊನಾ ಜಾಗೃತಿ ಮೂಡಿಸಲು ವಿನೂತನ, ವಿಶೇಷವಾದ ಪ್ರಯತ್ನ ನಡೆಸಿದ್ದಾರೆ. ಇದನ್ನೂ ಓದಿ: ರಾಜಾಹುಲಿ ಮನತುಂಬಿದ ನಗುವಿನ ಹಿಂದೆ ಅವರು..!

ದಾವಣಗೆರೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರು ಕೊರೊನಾ ನಿಯಮಾವಳಿಗಳನ್ನು ಪಾಲನೆ ಮಾಡದೆ ಸಾಕಷ್ಟು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಇದರಿಂದ ಭರತ್ ಕಾಲೋನಿಯ ಯುವಕ ರಾಕೇಶ್ ಹಾಗೂ ಆತನ ಸ್ನೇಹಿತರು ವಿನೂತನವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನೂ ಓದಿ: ನಾಳೆಯಿಂದ ರಾಜ್ಯಾದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಲಸಿಕೆ ಅಭಿಯಾನ: ನಾರಾಯಣಗೌಡ

ಕೊರೊನಾದ ವೇಷಭೂಷಣಗಳನ್ನು ಹಾಕಿಕೊಂಡು ಕೆಆರ್ ಮಾರುಕಟ್ಟೆ ಸೇರಿದಂತೆ ಜನಸಂದಣಿ ಇರುವ ಕಡೆ ಹೋಗಿ ಜಾಗೃತಿ ಮೂಡಿಸುತ್ತಿದ್ದಾರೆ. ಯಾರು ಮಾಸ್ಕ್ ಹಾಕೋದಿಲ್ವೋ ಅಂತವರಿಗೆ ಮಾಸ್ಕ್ ಹಾಕಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ: ಲಸಿಕೆ ಹಾಕಿಸಿಕೊಂಡ ವರನೇ ಬೇಕೆಂದ ವಧು – ಶಶಿ ತರೂರ್ ತಬ್ಬಿಬ್ಬು

ವೇಸ್ಟ್ ಆಗಿ ಬಿದ್ದಿರುವ ಥರ್ಮಕೋಲ್‍ಗಳನ್ನು ಬಳಸಿ ಕೊರೊನಾ ವೇಷಭೂಷಣಗಳನ್ನು ಸಿದ್ದ ಮಾಡಿಕೊಂಡಿದ್ದಾರೆ. ಹಲವು ದಿನಗಳಿಂದ ಈ ಯುವಕರ ತಂಡ ಸಾಕಷ್ಟು ಕೊರೊನಾ ಜಾಗೃತಿಯನ್ನು ಮೂಡಿಸುತ್ತಿದ್ದು, ಈ ಬಾರಿ ಕೊರೊನಾ ವೇಷಭೂಷಣಗಳನ್ನು ಧರಿಸಿ ಜನರಿಗೆ ಕೊರೊನಾ ಬಗ್ಗೆ ಜಾಗೃತಿಯನ್ನು ಹಾಗೂ ಕೊರೊನಾ ಸೋಂಕಿನಿಂದ ಜನರು ತಮ್ಮನ್ನು ತಾವು ರಕ್ಷಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *