ಶೀಲ ಶಂಕಿಸಿ ಪತ್ನಿಯನ್ನೇ ಕೊಂದ ಪತಿರಾಯ

Public TV
1 Min Read

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದ್ದು, ಆರೋಪಿ ಮಣಿ ತನ್ನ ಪತ್ನಿಯನ್ನು ಕೊಂದ ಪತಿರಾಯ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ನಿನ್ನೆ ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ. ಮಣಿ ಇತ್ತೀಚೆಗೆ ವಿಪರೀತ ಮದ್ಯ ಕುಡಿಯಲು ಆರಂಭಿಸಿದ್ದ. ಹೀಗಾಗಿ ಪತ್ನಿಯ ಶೀಲದ ಶಂಕಿಸಿ ಗಲಾಟೆ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡು ಯುವ ವೈದ್ಯೆ ಸಾವು

ನಿನ್ನೆ ರಾತ್ರಿ ನಡೆದ ಜಗಳದ ಸಿಟ್ಟಿನಿಂದ ಪತ್ನಿ ಆಶಾ ಮಲಗಿದ್ದ ಸಮಯದಲ್ಲಿ ಇಂದು ಬೆಳಗಿನಜಾವ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬೆಳಗ್ಗೆಯಾದರೂ ಆಶಾ ಮನೆಯಿಂದ ಹೊರಬಾರದ ಹಿನ್ನೆಲೆ ಪಕ್ಕದ ಮನೆಯವರು ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಕೂಡಲೇ ಹುಳಿಮಾವು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಪತಿ ಮಣಿ ಕೊಲೆ ಮಾಡಿರುವ ಬಗ್ಗೆ ಮಾಹಿತಿ ಬಂದಿದ್ದು, ಆತನ ಹುಡುಕಾಟ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *