ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು ಯಾಕೆ – ಇಂದು ಹೊರಬೀಳಲಿದೆ ಸತ್ಯ

Public TV
1 Min Read

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿ ಐಸಿಯು ಸೇರಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರನ್ನು ಶನಿವಾರ ರಾತ್ರಿ ರಾಮಯ್ಯ ಆಸ್ಪತ್ರೆಯ ಜನರಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ.

ಇಂದು ಸಂಜೆ ವೇಳೆಗೆ ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದರೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತೋಷ್ ವಿರುದ್ಧ ಐಪಿಸಿ ಸೆಕ್ಷನ್ 309(ಆತ್ಮಹತ್ಯೆಗೆ ಯತ್ನ) ಅಡಿ ಎಫ್‍ಐಆರ್ ದಾಖಲಾಗಿತ್ತು. ಹೀಗಾಗಿ ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದು ಎಂದು ಸಂತೋಷ್ ಹೇಳಿಕೆ ನೀಡಬೇಕಿದೆ. ವಾರ್ಡ್‍ಗೆ ಶಿಫ್ಟ್ ಆದ ಹಿನ್ನೆಲೆಯಲ್ಲಿ ಇಂದು ಸದಾಶಿವನಗರ ಪೊಲೀಸರು ಸಂತೋಷ್ ಅವರಿಂದ ಹೇಳಿಕೆ ಪಡೆಯುವ ಸಾಧ್ಯತೆಯಿದೆ.

ಅವ ಚಿಕ್ಕ ಹುಡುಗ:
ಅವ ಚಿಕ್ಕ ಹುಡುಗ. ಮೊನ್ನೆ ತಾನೆ ಮದ್ವೆ ಮಾಡ್ಕೊಂಡಿದ್ದಾನೆ ಎಂದು ವಸತಿ ಸಚಿವ ವಿ ಸೋಮಣ್ಣ ಸಂತೋಷ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.

ಶಿವಕುಮಾರ್ ಸಾಹೇಬ್ರು ಯಾಕೆ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ನಮ್ಮಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ನಿಮ್ಮಲ್ಲಿ ಏನಾದರೂ ದಾಖಲೆಗಳು ಇದ್ದರೆ ಕೊಡಿ ಅಂತ ಗೃಹ ಸಚಿವರು ಕೇಳಿದ್ದಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *