ಸಚಿವ ಸ್ಥಾನ ಕೊಟ್ರೆ ಬಿಜೆಪಿ ಸೇರ್ಪಡೆ: ಶಾಸಕ ಮಹೇಶ್

Public TV
1 Min Read

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಕಡೆಗೂ ತಮ್ಮ ಮುಂದಿನ ನಡೆಯ ಬಗ್ಗೆ ಮೌನ ಮುರಿದಿದ್ದಾರೆ. ಸಚಿವ ಸ್ಥಾನ ನೀಡಿದರೆ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.

ಈ ಕುರಿತು ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಸಮ್ಮಿಶ್ರ ಸರ್ಕಾರದ ಪತನದ ನಂತರ ಬಿಎಸ್‍ಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ನಾನು ಸ್ವತಂತ್ರವಾಗಿ ಉಳಿಯುತ್ತೇನೆ ಅಂತಿದ್ದ ಶಾಸಕ ಎನ್.ಮಹೇಶ್, ಇದೀಗ ಸಚಿವ ಸ್ಥಾನ ನೀಡಿದರೆ ಬಿಜೆಪಿ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ.

ಕಾರ್ಯಕರ್ತರು ಕೂಡ ಕಳೆದ ಒಂದು ವರ್ಷದಿಂದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕ್ಷೇತ್ರ, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಒಂದು ನಿರ್ಧಾರ ಮಾಡಿ ಎಂದು ಹೇಳಿದರು. ಒಂದು ಸ್ಥಾನ ಸಿಕ್ಕರೆ ಬಿಜೆಪಿ ಸೇರ್ಪಡೆಯಾಗಿ ಅಂದಿದ್ದಾರೆ. ಆದ್ದರಿಂದ ಸಚಿವ ಸ್ಥಾನ ಸಿಕ್ಕರೆ ಖಂಡಿತ ಬಿಜೆಪಿ ಸೇರುತ್ತೇನೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *