ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಬೊಮ್ಮಾಯಿ ಆದೇಶ

Public TV
1 Min Read

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯ ಖರ್ಚುಗೆ ಕಡಿವಾಣ ಹಾಕಿದ್ದು, ಹಾರ ತುರಾಯಿ ಹಾಕದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ಹಾಕವುದು ಬೇಡ. ಅನಗತ್ಯವಾಗಿ ಖರ್ಚು ವೆಚ್ಚ ಮಾಡುವುದು ಬೇಡ ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಬೇಸರಗೊಂಡ ಸಚಿವರನ್ನು ಸಿಎಂ ಬೊಮ್ಮಾಯಿ ಸಮಾಧಾನ ಮಾಡುತ್ತಾರೆ: ಸುನಿಲ್ ಕುಮಾರ್

ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಅವರು ತಿಳಿಸಿದರು.

ಅನಗತ್ಯ ಖರ್ಚು ವೆಚ್ಚ ಮಾಡದಂತೆ ಸಿಎಂ ಸೂಚನೆ ಬೆನ್ನಲ್ಲೇ ಮುಖ್ಯಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಇನ್ನು ಮುಂದೆ ಯಾವುದೇ ಕಾರ್ಯಕ್ರಮದಲ್ಲಿ ಹಾರ ತುರಾಯಿ, ಪೇಟ ಶಾಲು, ನೆನಪಿನ ಕಾಣಿಕೆ ನೀಡಬಾರದು. ಆದರೆ ಕನ್ನಡ ಪುಸ್ತಕಗಳನ್ನು ನೀಡಿ ಗೌರವಿಸಬಹುದೆಂದು ಆದೇಶದಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *