ಸರ್ಕಾರದಲ್ಲಿ ಗೊಂದಲಗಳಿಲ್ಲ, 18ರ ಯುವಕರಂತೆ ಸಿಎಂ ಕೆಲ್ಸ ಮಾಡ್ತಿದಾರೆ: ಸಚಿವ ಸೋಮಶೇಖರ್

Public TV
1 Min Read

ಚಿಕ್ಕೋಡಿ: ಲಾಕ್‍ಡೌನ್ ವಿಚಾರದಲ್ಲಿ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ಹಾಗೂ ಸಹಕಾರಿ ಇಲಾಖೆ ವತಿಯಿಂದ ಆಶಾ ಕಾರ್ಯಕರ್ತರಿಗೆ ಚೆಕ್ ವಿತರಣೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಮಾಡುವ ನಿರ್ಧಾರ ಕೈಗೊಳ್ಳಲು ಆಯಾ ಜಿಲ್ಲಾಡಿಳತಕ್ಕೆ ಬಿಡಲಾಗಿದೆ. ಬೆಂಗಳೂರಿನಲ್ಲಿ ಜನರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಲಾಕ್‍ಡೌನ್ ಮಾಡಲಾಗಿದೆ ಎಂದರು.

ಬೆಂಗಳೂರು ಲಾಕ್‍ಡೌನ್ ಮಾಡುವದರ ಬಗ್ಗೆ ಸಿಎಂ ನಿರ್ಣಯ ತೆಗೆದುಕೊಂಡಿದ್ದಾರೆ. ಸಿಎಂ ಯಡಿಯೂರಪ್ಪನವರು ಕೋವಿಡ್-19 ಸಂದರ್ಭದಲ್ಲಿ 18ರ ಯುವಕರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ನಿದ್ದೆಯಿಲ್ಲದೆ ಮುಖ್ಯಮಂತ್ರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯ ವೈಖರಿ ಬಗ್ಗೆ ಯಾರೂ ಮಾತನಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದರು. ಅಲ್ಲದೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣಾ ವಿಚಾರದಲ್ಲಿ ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ಇದಕ್ಕೂ ಮೊದಲು ಜೊಲ್ಲೆ ಉದ್ಯೋಗ ಸಮೂಗ ಸಂಸ್ಥೆಯ ಬಿರೇಶ್ವರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ 1485 ಆಶಾ ಕಾರ್ಯಕರ್ತರಿಗೆ ಒಬ್ಬರಿಗೆ 3 ಸಾವಿರ ರೂ.ಗಳಂತೆ 44.40 ಲಕ್ಷ ರೂ.ಗಳ ಚೆಕ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ ಇದ್ದರು.

Share This Article
Leave a Comment

Leave a Reply

Your email address will not be published. Required fields are marked *