ಸರ್ಕಾರದ ಶ್ವಾಸಕೋಶ ಸರಿಯಾಗಿದೆ, ಸಹಜವಾಗಿ ಉಸಿರಾಡುತ್ತಿದೆ, ತುಂಬಾನೇ ಗಟ್ಟಿಯಾಗಿವೆ: ಜೋಶಿ

Public TV
1 Min Read

ಧಾರವಾಡ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಗೊತ್ತಿಲ್ಲ, ಪ್ರಧಾನಿ ತೀರ್ಮಾನಿಸಿದಾಗ ವಿಸ್ತರಣೆಯಾಗುತ್ತದೆ. ರಾಜ್ಯ ಸರ್ಕಾರದ ಶ್ವಾಸಕೋಶ ಸರಿಯಾಗಿದೆ. ಸಹಜವಾಗಿ ಉಸಿರಾಡುತ್ತಿದೆ. ತುಂಬಾನೆ ಗಟ್ಟಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟ ಪ್ರಧಾನಿ ತೀರ್ಮಾನದ ಮೇಲೆ ವಿಸ್ತರಣೆ, ಪುನರ್ ರಚನೆ ಆಗುತ್ತದೆ. ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳುತ್ತಾರೆ ಗೊತ್ತಿಲ್ಲ. ಅದರ ಬಗ್ಗೆ ಮೊದಲೇ ನಮ್ಮ ಸರ್ಕಾರದಲ್ಲಿ ಗೊತ್ತಾಗುವುದಿಲ್ಲ. ಹೀಗಾಗಿ ನಾನು ಉತ್ತರಿಸಲು ಅರ್ಹನಲ್ಲ ಎಂದರು.

ರಾಜ್ಯ ಸರ್ಕಾರಕ್ಕೆ ಉಸಿರಾಟದ ಸಮಸ್ಯೆ ಇದೆಯಾ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಜೋಶಿ, ಸರ್ಕಾರದ ಶ್ವಾಸಕೋಶ ಈಗ ಸರಿಯಾಗಿವೆ, ಸಹಜವಾಗಿ ಉಸಿರಾಡುತ್ತಿದೆ, ಶ್ವಾಸಕೋಶಗಳು ತುಂಬಾನೇ ಗಟ್ಟಿಯಾಗಿವೆ ಹಾಗಾಗಿ ಸರಿಯಾಗಿ ಕೆಲಸ ಮಾಡುತ್ತಿದೆ. ನಮ್ಮ ಪಕ್ಷದಲ್ಲಿ ಯಾವುದೇ ಕಚ್ಚಾಟ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ: ಡಾ.ಸುಧಾಕರ್

ಸುತ್ತೂರು ಮಠಕ್ಕೆ ರಾಜಕಾರಣಿಗಳ ಭೇಟಿ ವಿಚಾರವಾಗಿ ಮಾತನಾಡಿ, ಶ್ರೀಗಳ ಮಾತೋಶ್ರೀ ನಿಧನರಾಗಿದ್ದರು. ಅವರನ್ನು ಭೇಟಿಯಾಗಲು ಕೆಲವರು ಹೋಗುತ್ತಿದ್ದಾರೆ, ಎಲ್ಲವನ್ನೂ ರಾಜಕೀಯ ಅಂದರೆ ಹೇಗೆ, ಅದಕ್ಕೆ ನಾವೇನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು.

ಪರೀಕ್ಷೆಯ ಫಲಿತಾಂಶಕ್ಕೆ ಕಾಯುತ್ತಿದ್ದೇವೆ ಎನ್ನುವ ಸಿ.ಪಿ ಯೋಗೇಶ್ವರ್ ಹೇಳಿಕೆ ವಿಚಾರವಾಗಿ ಮಾತನಾಡಿ, ಯೋಗೇಶ್ವರ್ ಯಾವ ವಿ.ವಿಯಲ್ಲಿ ಪರೀಕ್ಷೆ ಬರೆದಿದ್ದಾರೋ ಅಲ್ಲೇ ಫಲಿತಾಂಶ ಬರುತ್ತೆ. ಅವರು ಪರೀಕ್ಷೆ ಬರೆದ ವಿವಿಯ ಕುಲಪತಿ ಅರುಣ್ ಸಿಂಗ್ ಅವರು ಈಗಾಗಲೇ ಸರಿಯಾದ ಉತ್ತರ ಕೊಟ್ಟಿದ್ದಾರೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *