ಸಾಮಾಜಿಕ ಅಂತರ ನಿಯಮ ಉಲ್ಲಂಘನೆ ಬಸ್, ಆಟೋ, ಕ್ಯಾಬ್ ವಶಕ್ಕೆ: 9 ಪ್ರಕರಣ ದಾಖಲು

Public TV
1 Min Read

ಧಾರವಾಡ: ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಸಾಮಾಜಿಕ ಅಂತರ ನಿಯಮ ಪಾಲಿಸದೇ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ವಾಹನಗಳನ್ನು ಪೊಲೀಸರು ಸೀಜ್ ಮಾಡಿ, ಪ್ರಕರಣ ದಾಖಲಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತ್ಯೇಕವಾಗಿ ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. 3 ಬೇಂದ್ರೆ ನಗರಸಾರಿಗೆ ವಾಹನಗಳು, ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್ ಹಾಗೂ ಸರಕು ಸಾಗಣೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರ ನಿರ್ದೇಶನದ ಮೇರೆಗೆ ಆರ್‍ಟಿಓ ಅಧಿಕಾರಿಗಳಾದ ಅಪ್ಪಯ್ಯ ನಾಲತ್ವಾಡಮಠ ಹಾಗೂ ಸಿ.ಡಿ.ನಾಯಕ್ ಅವರ ನೇತೃತ್ವದಲ್ಲಿ ಅವಳಿ ನಗರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *