ಸಾರಿಗೆ ಮುಷ್ಕರ ಹಿಂಪಡೆಯುವಂತೆ ಸಿಎಂ ಬಿಎಸ್‍ವೈ ಮನವಿ

Public TV
1 Min Read

ಹುಬ್ಬಳ್ಳಿ: ಹಠ ಮಾಡದೇ ಪ್ರತಿಭಟನೆ ಹಿಂಪಡೆಯಿರಿ. ಸರ್ಕಾರ ಬಿಗಿಯಾದ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರಿಗೆ ನೌಕರರ ಬಳಿ ಮನವಿ ಮಾಡಿದ್ದಾರೆ.

ಬೆಳಗಾವಿ ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ತೆರಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬಿಎಸ್‍ವೈ, ಸಾರಿಗೆ ಸಂಸ್ಥೆಯ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಯಾವುದೇ ಕಾರಣಕ್ಕೂ ಸಾರಿಗೆ ನೌಕರರು ಹಠ ಮಾಡದೇ ನಾಳೆ ಕರೆ ನೀಡಿರುವ ರಾಜ್ಯ ವ್ಯಾಪಿಯ ಮುಷ್ಕರವನ್ನು ಹಿಂಪಡೆಯಬೇಕು ಎಂದರು.

ನಾವೆಲ್ಲಾ ಒಟ್ಟಾಗಿ ಜನರ ಹಿತದೃಷ್ಟಿಯಿಂದ ಕೆಲಸ ಮಾಡಬೇಕು. ಸರ್ಕಾರ ಬಿಗಿಯಾದ ಕ್ರಮಕೈಗೊಳ್ಳಲು ಅವಕಾಶ ಮಾಡಿಕೊಡಬೇಡಿ. ಮುಷ್ಕರ ಕೈ ಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದ ಸಿಎಂ, ನಾಳೆ ನಡೆಯುವ ಮುಷ್ಕರದ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಸರ್ಕಾರದಿಂದ ಏನು ಬೇಕು ಅದೆಲ್ಲಾ ವ್ಯವಸ್ಥೆಯನ್ನು ಮಾಡಿಕೊಂಡಿದ್ದೆವೆ. ಖಾಸಗಿ ವಾಹನ ಸೌಕರ್ಯ, ರೈಲು ವ್ಯವಸ್ಥೆ ಕೂಡಾ ಮಾಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *