ಸಾರ್ವಜನಿಕರ ಎದುರೇ ಉಜಿರೆಯ ಬಾಲಕನ ಕಿಡ್ನಾಪ್- ಮಾಹಿತಿ ಕೊಡಲು ಸ್ಥಳೀಯರು ಕೋರಿಕೆ

Public TV
1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 8 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ.

ಸಾರ್ವಜನಿಕರ ಎದುರೇ ದುಷ್ಕರ್ಮಿಗಳು ಉಜಿರೆಯಿಂದ ಬಿಳಿ ಬಣ್ಣದ ಹಾಗೂ ಯಲ್ಲೋ ಬೋರ್ಡ್ ಇದ್ದ ಇಂಡಿಕಾ ಕಾರಿನಲ್ಲಿ ಕಿಡ್ನಾಪ್ ಮಾಡಿದ್ದಾರೆ. ಈ ಘಟನೆ ನಿನ್ನೆ ಸಂಜೆ 6.30ರ ಸುಮಾರಿಗೆ ನಡೆದಿದೆ. ಕಾರು ಉಜಿರೆಯಿಂದ ಚಾರ್ಮಾಡಿ ಕಡೆ ಹೋಗಿದೆ.

ಕಿಡ್ನಾಪ್ ಬಳಿಕ ಬಾಲಕನ ತಂದೆ ಬಿಜೋಯ್ ಗೆ ಕರೆ ಮಾಡಿದ ದುಷ್ಕರ್ಮಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಕರೆ ಮಾಡಿದ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿದ್ದಾನೆ. ಬಾಲಕನ ತಂದೆಯ ಹಣಕಾಸು ವ್ಯವಹಾರ ಸಂಬಂಧ ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಯಾರದ್ದೋ ಜೊತೆಗಿನ ವ್ಯವಹಾರದ ಹಿನ್ನೆಲೆಯಲ್ಲಿ ಪೂರ್ವಯೋಜಿತ ಅಪಹರಣ ಮಾಡಿರಬಹುದು ಎಂಬ ಶಂಕೆ ಕೂಡ ವ್ಯಕ್ತವಾಗಿದ್ದು, ಸದ್ಯ ಚಾರ್ಮಾಡಿ ದಾಟಿ ಕಾರು ಸಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಈ ಕಾರಿನ ಬಗ್ಗೆ ಮಾಹಿತಿ ಕೊಡಲು ಸ್ಥಳೀಯರು ಕೋರಿಕೊಂಡಿದ್ದು, ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *