ಸಾಲದ ಸುಳಿ – ಮನೆಯವರನ್ನು ಹೊರಹಾಕಿ ನೇಣಿಗೆ ಶರಣಾದ

Public TV
1 Min Read

ಹುಬ್ಬಳ್ಳಿ: ಮನೆಯವರ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬ ಎಲ್ಲರನ್ನು ಮನೆಯಿಂದ ಹೊರ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯ ಬೇಪಾರಿ ಪ್ಲಾಟ್ ನಲತಲಿಯಲ್ಲಿ ನಡೆದಿದೆ.

ಅಮೀರ್ ಮಹ್ಮದಾಲಿ ಮನಿಯಾರ್ (28) ಮೃತನಾಗಿದ್ದಾನೆ. ನಿನ್ನೆ ರಾತ್ರಿ ಪತ್ನಿಯೊಂದಿಗೆ ಸಾಲದ ವಿಚಾರವಾಗಿ ಜಗಳ ಮಾಡಿದ್ದ ಅಮೀರ್ ತಡರಾತ್ರಿ ಮಡದಿ ಹಾಗೂ ಮಕ್ಕಳನ್ನು ಮನೆಯಿಂದ ಹೊರಹಾಕಿದ್ದಾನೆ. ನಂತರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಆದರೆ ಆತ್ಮಹತ್ಯೆಗೆ ಸಾಲ ಕಾರಣವಾ ಅಥವಾ ಬೇರೆ ಏನಾದರೂ ಕಾರಣವಿರಬಹುದೇ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಬೇಕಿದೆ. ಸುದ್ದಿ ತಿಳಿಯುತ್ತಿದ್ದಂತೆ ಹಳೇ ಹುಬ್ಬಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *