ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿ ಆತ್ಮಹತ್ಯೆ

Public TV
0 Min Read

ದಾವಣಗೆರೆ: ಸಾಹಸಿಂಹ ವಿಷ್ಣುವರ್ಧನ್ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಲೋಕೇಶ್(52) ಎಂದು ಗುರುತಿಸಲಾಗಿದೆ. ಇವರು ದಾವಣಗೆರೆಯ ಕೆಟಿಜೆ ನಗರದ ಡಾಂಗೇ ಪಾರ್ಕ್ ಬಳಿ ಇರುವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಹಸಸಿಂಹ ವಿಷ್ಣು ಅಭಿಮಾನಿಯಾಗಿ ಮಿಮಿಕ್ರಿ ಮಾಡುತ್ತಿದ್ದ ಲೋಕೇಶ್ ಅವರು ನಗರದ ಕೆಎಸ್‌ಆರ್‌ಟಿಸಿ ಮುಂಭಾಗ ಬೀಡ ಅಂಗಡಿ ನಡೆಸುತ್ತಿದ್ದರು. ಸಾಲದ ಬಾಧೆ ಹಿನ್ನೆಲೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆಟಿಜೆ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *