ಸಿಎಂ ಬದಲಾವಣೆ ಇಲ್ಲ, ಬಿಎಸ್‍ವೈ ನಮ್ಮ ನಾಯಕ: ಸಚಿವ ಸೋಮಣ್ಣ

Public TV
1 Min Read

– ಅಶೋಕ್, ಸಿಟಿ ರವಿ, ಶೆಟ್ಟರ್ ಸಭೆ ನಡೆಸಿರುವುದು ಸುಳ್ಳು
– ಯಾರೂ ಒಬ್ಬರನ್ನೊಬ್ಬರು ಭೇಟಿ ಮಾಡಿಲ್ಲ

ಹಾಸನ: ಸಿಎಂ ಬದಲಾವಣೆ ಮಾಧ್ಯಮಗಳ ಉಹಾಪೋಹ ಅಷ್ಟೆ. ಸಿಎಂ ಬದಲಾವಣೆ ಇಲ್ಲ. ಯಡಿಯೂರಪ್ಪ ಅವರೇ ನಮ್ಮ ಪಕ್ಷದ ನಾಯಕ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

 

ಜಿಲ್ಲಾ ಪಂಚಾಯಿತಿ ಸಭೆ ಬಳಿಕ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ದೆಹಲಿಗೆ ಹೋಗಿ ರಾಷ್ಟ್ರ ನಾಯಕರ ಭೇಟಿ ವಿಚಾರವಾಗಿ ಮಾತನಾಡುವಾಗ ಅವರು ಈ ಕುರಿತು ಸ್ಪಷ್ಟಪಡಿಸಿದರು. ಜಗದೀಶ್ ಶೆಟ್ಟರ್ ಬೃಹತ್ ಕೈಗಾರಿಕಾ ಸಚಿವರು, ಪ್ರಭಾವಿ ನಾಯಕರು. ಕೈಗಾರಿಕಾ ಕ್ಷೇತ್ರದ ಕುರಿತು ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ. ಇನ್ನಾವುದೇ ಉದ್ದೇಶ ಇಲ್ಲ ಎಂದು ಅವರು ತಿಳಿಸಿದರು.

ಕೈಗಾರಿಕಾ ಸಚಿವರು ಯಾಕೆ ದೆಹಲಿಗೆ ಹೋಗಿದ್ದರು ಎಂದು ನನ್ನನ್ನು ಕೇಳಿದರೆ ನನ್ನಂಥ ದಡ್ಡ ಯಾರೂ ಇಲ್ಲ. ಆದರೆ ಯಡಿಯೂರಪ್ಪ ಈ ರಾಜ್ಯದ ಮತ್ತು ನಮ್ಮ ಪಕ್ಷದ ಪ್ರಶ್ನಾತೀತ ನಾಯಕ ಎಂದು ಹೇಳಿದರು.

ಸಿಎಂ ಬದಲಾವಣೆ ವಿಚಾರದ ಬಗ್ಗೆ ಚಿಕ್ಕಮಗಳೂರಿನಲ್ಲಿ ಜಗದೀಶ್ ಶೆಟ್ಟರ್, ಆರ್.ಅಶೋಕ್ ಮತ್ತು ಸಿ.ಟಿ.ರವಿ ಭೇಟಿ ಮಾಡಿ ಸಭೆ ನಡೆಸಿದ್ದಾರೆ ಎಂಬುದರ ಕುರಿತು ಪ್ರತಿಕ್ರಿಯಿಸಿದ ಅವರು, ಸಿ.ಟಿ.ರವಿಯವರಿಗೆ ಕೋವಿಡ್-19 ಸೋಂಕು ತಗುಲಿತ್ತು. ಅವರನ್ನು ಮಾತನಾಡಿಸಲು ಯಾರೂ ಹೋಗಿರಲಿಲ್ಲ. ಆರ್.ಅಶೋಕ್ ಸಹ ಎಲ್ಲೋ ಇದ್ದರು. ಜಗದೀಶ್ ಶೆಟ್ಟರ್ ಅಲ್ಲಿ ಇರಲೇ ಇಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದರು.

Share This Article
Leave a Comment

Leave a Reply

Your email address will not be published. Required fields are marked *