ಸಿಐಡಿ ಡಿವೈಎಸ್‍ಪಿ ಆತ್ಮಹತ್ಯೆಗೆ ಟ್ವಿಸ್ಟ್ – ಲಕ್ಷ್ಮಿ ಸ್ನೇಹಿತನ ಮೇಲೆ ತಂದೆ ಅನುಮಾನ

Public TV
1 Min Read

ಬೆಂಗಳೂರು: ಸಿಐಡಿ ಡಿವೈಎಸ್‍ಪಿ ಲಕ್ಷ್ಮಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ತಂದೆ ವೆಂಕಟೇಶ್ ಅವರು ಸ್ನೇಹಿತನ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಮಗಳ ಸಾವಿನ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಲಕ್ಷ್ಮಿ ಸ್ನೇಹಿತ ಗುತ್ತಿಗೆದಾರ ಮನೋಹರ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪಾರ್ಟಿ ಮಾಡಿರೋ ವ್ಯಕ್ತಿ ಮನೋಹರ್ ಯಾರು ಗೊತ್ತಿಲ್ಲ. ನನ್ನ ಮಗಳಿಗೆ ಮನೆ, ಹಣ, ಅಧಿಕಾರ ಹೀಗೆ ಎಲ್ಲವೂ ಇದೆ. ಆದರೂ ಖಿನ್ನತೆ ಯಾಕೆ ಆಗುತ್ತೆ..?. 2 ದಿನದ ಹಿಂದೆ ಅಳಿಯ ಹೈದರಾಬಾದ್‍ಗೆ ಹೋಗಿದ್ದರು ಎಂದು ತಿಳಿಸಿದರು.

ಇದಕ್ಕೂ ಮೊದಲು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಸಂಬಂಧಿ ಲೋಕೇಶ್, ಲಕ್ಷ್ಮಿ ಅವರಿಗೆ ಕೌಟುಂಬಿಕವಾಗಿ ಯಾವುದೇ ಭಿನ್ನಾಭಿಪ್ರಾಯಗಳು ಇರಲಿಲ್ಲ. ಗಂಡ- ಹೆಂಡತಿ ಚೆನ್ನಾಗಿಯೇ ಇದ್ದರು. ಪ್ರೀತಿಸಿ ಮದುವೆಯಾಗಿದ್ದ ಅವರು ಪೋಷಕರಿಂದ ದೂರವಿದ್ದರೂ ಎಲ್ಲರ ಜೊತೆ ಸಂಪರ್ಕದಲ್ಲಿಯೇ ಇದ್ದರು. ಕೆಲಸದಲ್ಲಿದ್ದಿದ್ದರಿಂದ ಕಚೇರಿಯಲ್ಲಿ ಏನು ನಡೆದಿದೆ ಎಂಬುದರ ಬಗ್ಗೆ ಗೊತ್ತಿಲ್ಲ. ಮಕ್ಕಳಾಗಿಲ್ಲ ಎಂಬ ಕೊರಗು ಅವರಲ್ಲಿತ್ತು. ಹೀಗಾಗಿ ಇದೇ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ ಎಂದರು.

ಲಕ್ಷ್ಮಿ ಅವರುಕಳೆದ 8 ವರ್ಷದ ಹಿಂದೆ ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಸದ್ಯ ಪೋಷಕರಿಂದ ದೂರ ಇದ್ದ ಲಕ್ಷ್ಮೀ, ಬೆಂಗಳೂರಿನಲ್ಲಿ ವಾಸವಾಗಿದ್ದರು. ನಿನ್ನೆ ಮನೋಹರ್ ಮನೆಯಲ್ಲಿ ಲಕ್ಷ್ಮಿ ಸೇರಿ ಐವರು ಸೇರಿ ಪಾರ್ಟಿ ಮಾಡಿದ್ರು. ಪಾರ್ಟಿ ನಂತರ 10 ಗಂಟೆಗೆ ರೂಂಗೆ ತೆರಳಿದ್ದ ಲಕ್ಷ್ಮಿ ಇಂದು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಲಕ್ಷ್ಮಿ ಆತ್ಮಹತ್ಯೆಯ ಹಿಂದೆ ಅನುಮಾನಗಳು ಹುಟ್ಟಿಕೊಂಡಿದ್ದು, ಮನೋಹರ್, ಪ್ರಜ್ವಲ್ ಸೇರಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

https://www.youtube.com/watch?v=5J28oeJCgJU&ab_channel=PublicTV%7C%E0%B2%AA%E0%B2%AC%E0%B3%8D%E0%B2%B2%E0%B2%BF%E0%B2%95%E0%B3%8D%E0%B2%9F%E0%B2%BF%E0%B2%B5%E0%B2%BF

Share This Article
Leave a Comment

Leave a Reply

Your email address will not be published. Required fields are marked *