ಸಿಡಿ ವಿಚಾರದಲ್ಲಿ ಏನು ಮಾತನಾಡಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Public TV
0 Min Read

ಹುಬ್ಬಳ್ಳಿ: ಮಾಜಿ ಸಚಿವರೊಬ್ಬರ ರಾಸಲೀಲೆ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ತಳಕು ಹಾಕುತ್ತಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜಕಾರಣಿಗಳನ್ನು ಜನರು ಗಮನಿಸುತ್ತಿದ್ದಾರೆ. ನಾವೂ ಎಲ್ಲರಿಗೂ ಉದಾಹರಣೆಯಾಗಿರಬೇಕು ಎಂದರು.

ಗೋಕಾಕ್ ಪ್ರತಿಭಟನೆಯಲ್ಲಿ ನನ್ನ ಹೆಸರು ಯಾಕೆ ಪ್ರಸಾಪ್ತ ಮಾಡಲಾಗಿದೆ ಎಂಬುವುದು ತಿಳಿಯುತ್ತಿಲ್ಲ. ಸಿಡಿ ವಿಚಾರದಲ್ಲಿ ಯಾರಿದ್ದಾರೆ ಎನ್ನುವುದು ತನಿಖೆಯಿಂದ ಬಯಲಾಗಲಿದೆ. ಸಿಡಿ ವಿಚಾರದಲ್ಲಿ ಕೆಪಿಪಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಕೇಳಿ ಬರುತ್ತಿರುವ ಬಗ್ಗೆ ನೀವೂ ಅವರನ್ನೇ ಕೇಳಿ ಎಂದು ಕಿಡಿಕಾರಿದರು.

Share This Article
Leave a Comment

Leave a Reply

Your email address will not be published. Required fields are marked *