ಸಿಮೆಂಟ್ ತುಂಬಿದ ವಾಹನ ಪಲ್ಟಿ – ಇಬ್ಬರು ಕಾರ್ಮಿಕರು ದಾರುಣ ಸಾವು

Public TV
0 Min Read

ವಿಜಯಪುರ: ಸಿಮೆಂಟ್ ತುಂಬಿಕೊಂಡು ಕೆಲಸದ ಕಡೆಗೆ ಸಾಗುತ್ತಿದ್ದ ವಾಹನವೊಂದು ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ನೇಬಗೇರಿ ಬಳಿ ನಡೆದಿದೆ.

ಮೃತ ದುರ್ದೈವಿಗಳನ್ನು ಗೆದ್ದಲಮರಿ ತಾಂಡಾದ ನಿವಾಸಿ ವೆಂಕಟೇಶ್ ಪವಾರ(40) ಹಾಗೂ ಢವಳಗಿ ನಿವಾಸಿ ನಾಗಪ್ಪ ದಂಡೆನ್ನವರ್(45) ಎಂದು ಗುರುತಿಸಲಾಗಿದೆ. ಇವರೊಂದಿಗೆ ಇನ್ನು ಇಬ್ಬರು ಕಾರ್ಮಿಕರು ಮುದ್ದೇಬಿಹಾಳದಿಂದ ನೇಬಗೇರಿಗೆ ಸಿಮೆಂಟ್ ತುಂಬಿಕೊಂಡು ಲಾರಿಯಲ್ಲಿ ಹೊಗುವಾಗ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟರೆ ಇನ್ನಿಬ್ಬರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವಾಹನ ಪಲ್ಟಿಯಾಗಲು ಕಾರಣ ಏನೆಂದು ತಿಳಿದುಬಂದಿಲ್ಲ. ಈ ಕುರಿತು ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *