ಸುಮಲತಾ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ

Public TV
1 Min Read

ಮಂಡ್ಯ: ಸಂಸದೆ ಸುಮಲತಾ ದಾಳಿ ಬೆನ್ನಲ್ಲೇ ಅಕ್ರಮ ಗಣಿಗಳ ಮೇಲೆ ತಹಶೀಲ್ದಾರ್ ದಾಳಿ ಮಾಡಿ ಗಣಿಗಳನ್ನು ಬಂದ್ ಮಾಡಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಶ್ರೀರಂಗಪಟ್ಟಣದ ಚೆನ್ನನಕೆರೆ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಲ್ಲು ಕ್ವಾರೆ ಹಾಗೂ ಶ್ರೀರಂಗಪಟ್ಟಣ ಕ್ವಾರೆಗಳ ಮೇಲೆ ತಹಶೀಲ್ದಾರ್ ರೂಪಾ ದಾಳಿ ಮಾಡಿ ಬಂದ್ ಮಾಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ಬಗ್ಗೆ ಸಿಬಿಐ ತನಿಖೆ ಆಗಬೇಕು – ಮಂಡ್ಯ ಸಂಸದೆ ಸುಮಲತಾ ಆಗ್ರಹ

ಚೆನ್ನನಕೆರೆ ಸಮೀಪದಲ್ಲಿ ಅಕ್ರಮವಾಗಿ ಕಲ್ಲು ಕ್ವಾರೆ ನಡೆಯುತ್ತಿದ್ದು, ಅಕ್ರಮ ಕ್ವಾರೆ ಪ್ರದೇಶಗಳಿಗೆ ಶ್ರೀರಂಗಪಟ್ಟಣ ತಹಶೀಲ್ದಾರ್ ರೂಪ ಪೊಲೀಸರ ಜೊತೆ ದಾಳಿ ನಡೆಸಿ ಅಕ್ರಮ ಕ್ವಾರೆಗಳಿಗೆ ಬೀಗ ಜಡಿದಿದ್ದಾರೆ. ಇತ್ತೀಚೆಗಷ್ಟೇ ಈ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಿದ್ದ ಸಂಸದೆ ಸುಮಲತಾ ಅವರು ಅಕ್ರಮ ಕಲ್ಲು ಕ್ವಾರೆಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ಇದರ ಬೆನ್ನಲ್ಲೇ ಅಧಿಕಾರಿಗಳು ಅಕ್ರಮ ಕಲ್ಲು ಕ್ವಾರೆಗಳ ಮೇಲೆ ದಾಳಿ ಮಾಡಿದ್ದಾರೆ. ಕಠಿಣ ಕ್ರಮಕ್ಕೆ ಮುಂದಾಗಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ

ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಕೆರೆ ಮತ್ತು ಹಂಗರಹಳ್ಳಿಯಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವೀಕ್ಷಣೆಗೆ ಹೋಗದಂತೆ ಅಡ್ಡಿಪಡಿಸಿದ್ದನ್ನು ನೋಡಿ ಸುಮಲತಾ, ಇದೇನ್ ಭಾರತ-ಪಾಕಿಸ್ತಾನ ಗಡಿನಾ ಎಂದು ಆಘಾತ ವ್ಯಕ್ತಪಡಿಸಿದ್ದರು. ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಊರವರ ಮನೆಗಳನ್ನು ನೋಡಿ ಶಾಕ್ ಆಗಿದ್ದರು. ಅಕ್ರಮ ಗಣಿಗಾರಿಕೆ ಬಗ್ಗೆ ಮಾತಾಡುವ ವೇಳೆ ವಿಷಯವನ್ನು ಬೇರೆಡೆಗೆ ತಿರುಗಿಸುವ ಯತ್ನ ಮಾಡಲಾಗ್ತಿದೆ. ಶಾಸಕರಿಗೆ ನಿಮ್ಮ ಕೊಡುಗೆ ಏನು..? ನಿಮ್ಮ ಕಣ್ಣ ಮುಂದೆಯೇ ಇಷ್ಟು ಭ್ರಷ್ಟಾಚಾರ, ಅನ್ಯಾಯ ನಡೆಯುತ್ತಿದ್ದರೂ ಏಕೆ ಸುಮ್ಮನಿದ್ದೀರಿ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯಗೆ ಸುಮಲತಾ ತಿರುಗೇಟು ನೀಡಿದ್ದರು.

ಮಾಜಿ ಶಾಸಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಭೇಟಿ ನೀಡುವಂತೆ ಘೋಷಣೆ ಕೂಗಿದರು. ಆ ಬಳಿಕ ಬಂಡಿಸಿದ್ದೇಗೌಡ ಮಾಲೀಕತ್ವದ ಗಣಿಗಾರಿಕೆಗೂ ಸುಮಲತಾ ಭೇಟಿ ನೀಡಿ ಪರಿಶೀಲಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *