ಸುಶಾಂತ್ ಸಿಂಗ್ ರಜಪೂತ್ ಅತ್ತಿಗೆ ನಿಧನ

Public TV
1 Min Read

-ಸಾವಿನ ಸುದ್ದಿ ಕೇಳಿ ಅನ್ನಾಹಾರ ಬಿಟ್ಟಿದ್ರು

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅತ್ತಿಗೆ ಸುಧಾ ನಿಧನರಾಗಿದ್ದಾರೆ. ಮೈದುನನ ಸಾವಿನ ಸುದ್ದಿ ಕೇಳಿ ಸುಧಾ ಆಘಾತಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ.

ಮುಂಬೈನಲ್ಲಿ ಸುಶಾಂತ್ ಅಂತ್ಯಕ್ರಿಯೆ ನಡೆಯುತ್ತಿದ್ರೆ, ಇತ್ತ ಬಿಹಾರಾ ಪೂರ್ಣಿಯಾದಲ್ಲಿ ಅತ್ತಿಗೆ ಸುಧಾ ನಿಧನರಾಗಿದ್ದಾರೆ. ಸುಶಾಂತ್ ಚಿಕ್ಕಪ್ಪನ ಮಗನ ಪತ್ನಿ ಸಾವನ್ನಪ್ಪಿರೋದು ಕುಟುಂಬಕ್ಕೆ ಮತ್ತೊಂದು ದೊಡ್ಡ ಆಘಾತವನ್ನುಂಟು ಮಾಡಿದೆ.

ಭಾನುವಾರ ಫ್ಯಾನಿಗೆ ನೇಣು ಹಾಕಿಕೊಂಡು ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದರು. ಸೋಮವಾರ ಸಂಜೆ ಮುಂಬೈನ ವಿಲೆ ಪಾರ್ಲೆ ಸೇವಾ ಸಮಾಜದಲ್ಲಿ ಸುಶಾಂತ್ ಅಂತ್ಯಕ್ರಿಯೆ ನಡೆದಿತ್ತು. ಶ್ರದ್ಧಾ ಕಪೂರ್, ಕೃತಿ ಸನನ್, ರಿಯಾ ಚಕ್ರವರ್ತಿ, ವಿವೇಕ್ ಒಬೇರಾಯ್, ರಾಜಕುಮಾರ್ ಹಿರಾಣಿ ಹಾಗೂ ಸುಶಾಂತ್ ಕುಟುಂಬದವರು ಮಾತ್ರ ಅಂತಿಮ ವಿಧಿವಿಧಾನಗಳಲ್ಲಿ ಭಾಗಿಯಾಗಿದ್ದರು. ಕೊರೊನಾ ಆತಂಕದ ಹಿನ್ನೆಲೆ ಅಭಿಮಾನಿಗಳಿಗೆ ಸ್ಮಶಾನದೊಳಗೆ ಪ್ರವೇಶ ನೀಡಿರಲಿಲ್ಲ.

ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆ ಅಲ್ಲ ಯೋಜಿತ ಕೊಲೆ ಎಂದು ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ಆರೋಪ ಮಾಡಿದ್ದಾರೆ. ಬಾಲಿವುಡ್‍ನಲ್ಲಿ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರ ಬಯೋಗ್ರಾಪಿ ‘ಧೋನಿ’ ಸಿನಿಮಾದಲ್ಲಿ ಅಭಿನಯಿಸಿ ಭಾರತ ಕಲಾರಸಿಕರ ಮನಗೆದ್ದಿದ್ದ ಸುಶಾಂತ್ ಸಿಂಗ್ ರಜಪೂತ್, ಭಾನುವಾರ ತಮ್ಮ ನಿಸವಾದಲ್ಲೇ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಈಗ ಈ ವಿಚಾರವಾಗಿ ಮಾತನಾಡಿರುವ ಕಂಗನಾ ಬಾಲಿವುಡ್‍ನಲ್ಲಿರುವ ತಾರತಮ್ಯದ ಬಗ್ಗೆ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *