ಸೋಂಕಿತನ ಅಂತ್ಯಕ್ರಿಯೆಗೆ ಅಡ್ಡಿ- 100 ಜನರ ಮೇಲೆ ಪ್ರಕರಣ ದಾಖಲು

Public TV
1 Min Read

ಕಾರವಾರ: ಕೊರೊನಾ ಸೋಂಕಿತನ ಅಂತ್ಯ ಸಂಸ್ಕಾರಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಠಾಣೆಯಲ್ಲಿ ಜನಪ್ರತಿನಿಧಿಗಳೂ ಸೇರಿ ನೂರು ಜನರ ಮೇಲೆ ಪ್ರಕರಣ ದಾಖಲಾಗಿದೆ.

ಇದೇ ತಿಂಗಳ ಆರನೇ 6ರಂದು ಶಿರಸಿಯ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಯನ್ನು ಕಾರವಾರದ ತಹಶೀಲ್ದಾರ್ ನೇತೃತ್ವದಲ್ಲಿ ಕಾರವಾರದ ಸರ್ವೋದಯ ನಗರದ ಸ್ಮಶಾನದಲ್ಲಿ ಮಾಡಲು ನಗರಸಭೆ ಸಿಬ್ಬಂದಿಗಳು ವ್ಯವಸ್ಥೆ ಮಾಡಿದ್ದರು. ಆದರೆ ಸ್ಥಳೀಯ ನಗರಸಭಾ ಸದಸ್ಯರು ಹಾಗೂ ಜನರು ಇದಕ್ಕೆ ವಿರೋಧ ವ್ಯಕ್ತಪಡಿಸಿ ಸ್ಮಶಾನದಲ್ಲಿ ಗೆರಾವ್ ಹಾಕಿ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.

ಈ ಕಾರಣದಿಂದ ಕಾರವಾರ ತಹಶೀಲ್ದಾರ್ ಆರ್.ವಿ ಕಟ್ಟಿ ಅವರು ಇಂದು ಕಾರವಾರ ನಗರ ಠಾಣೆಯಲ್ಲಿ ದೂರು ನೀಡಿದ್ದು, ಈ ದೂರಿನ ಅನ್ವಯ ಕರ್ತವ್ಯಕ್ಕೆ ಅಡ್ಡಿ ಹಿನ್ನೆಲೆಯಲ್ಲಿ ನೂರು ಜನರ ಮೇಲೆ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *