ಸೋದರಿ ಜೊತೆ ಅನುಚಿತವಾಗಿ ವರ್ತಿಸಬೇಡ ಅಂದಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ

Public TV
1 Min Read

ಗದಗ: ತನ್ನ ಸಹೋದರಿ ಜೊತೆಗೆ ಮಾತನಾಡುವುದು, ಭೇಟಿ ಮಾಡಿ ಅನುಚಿತವಾಗಿ ವರ್ತಿಸಬೇಡಿ ಅಂದಿದ್ದಕ್ಕೆ ಸಹೋದರರಿಬ್ಬರು ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

23 ವರ್ಷದ ಮುಸ್ತಾಕ್ ಅಲಿ ನದಾಫ್ ಕೊಲೆಯಾದ ಯುವಕ. ದಾವಲ್ ಸಾಬ್ ಮಲ್ಲಾಡದ ಹಾಗೂ ಮಹ್ಮದ್ ಅಲಿ ಮಲ್ಲಾಡದ ಎಂಬ ಸಹೋದರರು ಒಟ್ಟಾಗಿ ಮುಸ್ತಾಕ್ ಅಲಿ ಜೊತೆ ಜಗಳವಾಡಿದ್ದಾರೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಗಾಯಗೊಂಡಿದ್ದ ಮುಸ್ತಾಕ್ ಅಲಿಯನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಸಹೋದರಿ ವಿಷಯದ ಜಗಳ ಚಾಕುವಿನಿಂದ ಇರಿತಕ್ಕೊಳಗಾಗಿ ಸಾವಿನೊಂದಿಗೆ ಅಂತ್ಯವಾಗಿದೆ. ಸಹೋದರ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *