ಹತ್ಯಾಕಾಂಡದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ: ರಾಹುಲ್ ಗಾಂಧಿ

Public TV
2 Min Read

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರ ಹತ್ಯೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಅವರ ತ್ಯಾಗ ವ್ಯರ್ಥವಾಗುವುದಿಲ್ಲ ಎಂದಿದ್ದಾರೆ.

ರಾಹುಲ್ ಗಾಂಧಿ ಟ್ವಿಟ್ಟರ್‍ನಲ್ಲಿ ಖಂಡಿಸಿದ್ದು, ಈ ಅಮಾನವೀಯ ಹತ್ಯಾಕಾಂಡವನ್ನು ನೋಡಿದ ನಂತರವೂ ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ. ಆದರೆ ನಾವು ಈ ತ್ಯಾಗವನ್ನು ವ್ಯರ್ಥವಾಗಿ ಬಿಡುವುದಿಲ್ಲ, ಕಿಸಾನ್ ಸತ್ಯಾಗ್ರಹ ಜಿಂದಾಬಾದ್! ರೈತ ರಕ್ಷಣೆ ಎಂದು ಬರೆದು ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

ಘಟನೆಯೇನು..?
ಲಖೀಂಪುರ್‍ನಲ್ಲಿ ಉಪ ಮುಖ್ಯಮಂತ್ರಿ ಕೇಶವ್‍ಪ್ರಸಾದ್ ಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಭೇಟಿ ನೀಡುವ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಬೆಂಗಾವಲು ವಾಹನಗಳ ಸಾಲಿನಲ್ಲಿ ಬರುತ್ತಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾನ ಪುತ್ರ ಇದ್ದ ರೈತರ ಮೇಲೆ ಹರಿದು ನಾಲ್ವರು ರೈತರು ಮೃತಪಟ್ಟಿದ್ದಾರೆ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಆ ಬಳಿಕ ಅಲ್ಲಿ ಪ್ರತಿಭಟನೆ ಉದ್ರಿಕ್ತಗೊಂಡು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

ಲಂಖಿಪುರದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ರೈತರ ಮನೆಗಳಿಗೆ ಭೇಟಿ ನೀಡಲೆಂದು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿಯವರನ್ನು ಉತ್ತರಪ್ರದೇಶದ ಪೊಲೀಸರು ತಡೆದಿದ್ದರು. ಈ ವೇಳೆ ಪ್ರಿಯಾಂಕಾ ಗಾಂಧಿ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಪೊಲೀಸರು ಪ್ರಿಯಾಂಕಾ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ಪೊಲೀಸರ ವಶದಲ್ಲಿರುವ ಪ್ರಿಯಾಂಕ ಅವರಿಗೆ ರಾಹುಲ್ ಗಾಂಧಿ ಧೈರ್ಯದ ಮಾತುಗಳನ್ನು ಹೇಳಿದ್ದಾರೆ.

ಈ ಪ್ರಕರಣದಿಂದ ನೀವು ಹಿಂದೆ ಸರಿಯಲ್ಲ ಎಂದು ನನಗೆ ಗೊತ್ತು. ಈ ನಿಮ್ಮ ಧೈರ್ಯಕ್ಕೆ ಅವರೇ ಹೆದರುತ್ತಾರೆ. ಈ ಅಹಿಂಸಾತ್ಮಕ ಹೋರಾಟದ ನ್ಯಾಯಕ್ಕಾಗಿ ನಾವು ದೇಶದ ರೈತರನ್ನು ಗೆಲ್ಲುವಂತೆ ಮಾಡುತ್ತೇವೆ ಎಂದು ಟ್ವೀಟ್ ಮಾಡುವ ಮೂಲಕವಾಗಿ ಪೊಲೀಸರ ವಶದಲ್ಲಿ ಇರುವ ಪ್ರಿಯಾಂಕಾ ಅವರಿಗೆ ಧೈರ್ಯವನ್ನು ತುಂಬಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *