ಹೂವಿನ ಕುಂಡ ಸಿಡಿದು ರಸ್ತೆ ಬದಿ ನಿಂತಿದ್ದ ಬಾಲಕನ ಕಣ್ಣಿಗೆ ಗಾಯ

Public TV
1 Min Read

ಬೆಂಗಳೂರು: ರಸ್ತೆ ಬದಿ ನಿಂತಿದ್ದ ಹುಡುಗನ ಮೇಲೆ ಪಟಾಕಿ ಸಿಡಿದು ಕಣ್ಣಿಗೆ ಗಾಯವಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ರಸ್ತೆ ಬದಿ ಹೂವಿನ ಕುಂಡವನ್ನ ಹಚ್ಚಲಾಗಿತ್ತು. ಈ ವೇಳೆ ಕಾಮಾಕ್ಷಿ ಪಾಳ್ಯದ ನಿವಾಸಿಯಾಗಿರುವ 12 ವರ್ಷದ ಬಾಲಕ ನಡೆದುಕೊಂಡು ಬಂದು ರಸ್ತೆ ಬದಿ ನಿಂತಿದ್ದನು. ಇದೇ ವೇಳೆ ಹೂವಿನ ಕುಂಡ ಸಿಡಿದು ಆತನ ಕಣ್ಣಿಗೆ ಹಾನಿಯಾಗಿದೆ. ಕೂಡಲೇ ಬಾಲಕನನ್ನು ಮಿಂಟೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಭಾನುವಾರ ರಾತ್ರಿ ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿತ್ತು. ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.

ಸುಂಕದ ಕಟ್ಟೆ ಮೂಲದ 11 ವರ್ಷ ವಯಸ್ಸಿನ ಹುಡುಗ ಹೂವಿನ ಕುಂಡ ಹಚ್ಚಲು ಹೋಗಿ ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾನೆ. ಉಳಿದ ಇಬ್ಬರು ಪಟಾಕಿ ಹಚ್ಚಲು ಹೋಗಿ ಎಡಗಣ್ಣು ಮತ್ತು ಬಲಗಣ್ಣಿಗೆ ಹಾನಿ ಮಾಡಿಕೊಂಡಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಮೂವರೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ ಮಿಂಟೋ ಆಸ್ಪತ್ರೆಗೆ ಒಟ್ಟು 7 ಮಂದಿ ಮಕ್ಕಳು ಪಟಾಕಿ ಹಾನಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *