ಹೆಚ್‍ಡಿಕೆ, ಸುಮಲತಾ ವಾಕ್ಸಮರ- ಅಂಬಿ ಅಭಿಮಾನಿಗಳಿಂದ ಪ್ರತಿಭಟನೆ

Public TV
1 Min Read

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅವರ ಪರ ನಾವಿದ್ದೇವೆ ಎಂದು ಅಂಬಿ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ರವರು ಹೇಳಿದ್ದಾರೆ.

ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ವಾಕ್ ಸಮರ ಹಿನ್ನೆಲೆ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ಬೆಂಗಳೂರು ಘಟಕದ ವತಿಯಿಂದ ಪ್ರತಿಭಟನೆ ಪ್ರಾರಂಭವಾಗಿದೆ. ಬೆಂಗಳೂರಿನ ಕಂಠೀರವ ಸ್ಟೋಡಿಯೋದ ಬಳಿ ಸುಮಾರು 50ಕ್ಕೂ ಹೆಚ್ಚು ಅಭಿಮಾನಿಗಳು ಸೇರಿದ್ದು, ಅಂಬರೀಷ್ ಫೋಟೋ ಹಿಡಿದು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಂಬರೀಶ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ರವರು ಮಾತನಾಡಿ, ಮಂಡ್ಯ ಸಂಸದೆ ಸುಮಲತಾ ಅವರ ಪರ ನಾವಿದ್ದೇವೆ. ಕುಮಾರಸ್ವಾಮಿ ಮನೆ ಮುಂದೆ ನಮಗೆ ಪ್ರೊಟೆಸ್ಟ್ ಮಾಡುವುದಕ್ಕೆ ಕೆಪಾಸಿಟಿ ಇಲ್ವಾ. ಪುಷ್ಪಾ ಅಮರನಾಥ್, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಮಹಿಳಾ ಮಣಿಗಳಿದ್ದಾರೆ. ಯಾರೂ ಮಾತಾನಾಡುವುದಕ್ಕೆ ಮುಂದೆ ಬರುತ್ತಿಲ್ಲ. ಅಂಬರೀಶ್ ಅಣ್ಣ ಇದ್ದಾಗ ಯಾವ ನಾಯಿಗಳು ಬೊಗಳುತ್ತಿರಲಿಲ್ಲ. ಅಂಬರೀಶ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಸುಮಲತಾ ಏಕಾಂಗಿಯಾಗಿ ಗೆದ್ದಿದ್ದಾರೆ ಏಕಾಂಗಿಯಾಗಿ ಎದುರಿಸ್ತಾರೆ: ಲಿಂಬಾವಳಿ

Share This Article
Leave a Comment

Leave a Reply

Your email address will not be published. Required fields are marked *