ಹೆರಿಗೆಯಾದ ನಂತ್ರ ಬಾಣಂತಿ ಸಾವು- ವೈದ್ಯರ ವಿರುದ್ಧ ಸಂಬಂಧಿಕರು ಆಕ್ರೋಶ

Public TV
1 Min Read

ರಾಯಚೂರು: ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆಯಾದ ನಂತರ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಮೃತ ಮಹಿಳೆಯ ಸಂಬಂಧಿಕರು ಆರೋಪ ಮಾಡಿದ್ದಾರೆ.

ಈ ಘಟನೆ ರಾಯಚೂರಿನ ದೇವದುರ್ಗದ ತಾಲೂಕು ಆಸ್ಪತ್ರೆಯಲ್ಲಿ ನಡೆದಿದ್ದು, ದೇವದುರ್ಗದ ಯಲ್ಲಾದೊಡ್ಡಿ ತಾಂಡದ ಶಿವಮ್ಮ( 24) ಮೃತ ಬಾಣಂತಿ. ಹೆರಿಗೆಯಾದ ಬಳಿಕ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಮಗು ಕ್ಷೇಮವಾಗಿದ್ದು, ತಾಯಿ ಮೃತಪಟ್ಟಿದ್ದಾರೆ.

ಶಿವಮ್ಮನಿಗೆ ಮಧ್ಯರಾತ್ರಿ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಅಕೆಯನ್ನು ಬೆಳಗ್ಗಿನ ಜಾವ ನಾಲ್ಕು ಗಂಟೆಗೆ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಬರುವ ಮಾರ್ಗಮಧ್ಯೆದಲ್ಲೇ ಹೆರಿಗೆಯಾಗಿದೆ. ಈ ವೇಳೆ ಬೆಳಗ್ಗಿನ ಜಾವ ನಾಲ್ಕು ಗಂಟೆಯಾಗಿದ್ದ ಕಾರಣ ಯಾವ ವೈದ್ಯರು ಬಾಣಂತಿಗೆ ಚಿಕಿತ್ಸೆ ನೀಡಲು ಬಂದಿಲ್ಲ. ಈ ಕಾರಣದಿಂದ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *