ಹೋಟೆಲ್ ಕ್ವಾರಂಟೈನ್‍ಗೆ ಒಪ್ಪದ ಪ್ರಯಾಣಿಕರು ದೆಹಲಿಗೆ ವಾಪಸ್

Public TV
2 Min Read

– ಏರ್‌ಪೋರ್ಟಿನಲ್ಲಿ ಮಹಿಳೆ ರಂಪಾಟ
– ಹೋಂ ಕ್ವಾರಂಟೈನ್‍ಗೆ ತೆರಳಿದ ಸದಾನಂದ ಗೌಡ

ಬೆಂಗಳೂರು: ಇಂದಿನಿಂದ ದೇಶಿಯ ವಿಮಾನಗಳ ಹಾರಾಟ ಆರಂಭವಾಗಿದ್ದು, ಚೆನ್ನೈ ಹಾಗೂ ದೆಹಲಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನಗಳು ಆಗಮಿಸಿವೆ.

ಎರಡು ತಿಂಗಳ ಬಳಿಕ ಮೊದಲ ಬಾರಿಗೆ ದೇಶಿಯ ವಿಮಾನ ಹಾರಾಟ ನಡೆಸಿದ್ದು, ಇಂದು 120 ಜನ ಪ್ರಯಾಣಿಕರು ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಬಂದವರನ್ನೆಲ್ಲ ಹೋಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದರೆ ಇದಕ್ಕೆ ಒಪ್ಪದ ಕೆಲ ಪ್ರಯಾಣಿಕರು ದೆಹಲಿಗೆ ವಾಪಸ್ಸಾಗಿದ್ದಾರೆ.

ಎಲ್ಲಾ ಪ್ರಯಾಣಿಕರಿಗೆ ಏಳು ದಿನ ಹೋಟೆಲ್ ಕ್ವಾರಂಟೈನ್ ಇನ್ನೂ ಏಳು ದಿನ ಹೋಂ ಕ್ವಾರಂಟೈನ್ ಕಡ್ಡಾಯವಾಗಿದೆ. ಕ್ವಾರಂಟೈನ್ ಗೆ ಹೋಗುವವರು ತಮ್ಮದೇ ಖರ್ಚಿನಲ್ಲಿ ಟಿಕೆಟ್ ಖರೀದಿ ಮಾಡಬೇಕು, ಹೋಮ್ ಕ್ವಾರಂಟೈನ್ ಆಗುವವರು ಕೂಡ ತಮ್ಮದೇ ಖರ್ಚಿನಲ್ಲಿ ಕ್ಯಾಬ್ ಗಳನ್ನು ಬುಕ್ ಮಾಡಿಕೊಳ್ಳಬೇಕು.

ಏರ್ ಪೋರ್ಟಿನಿಂದ ನಿರ್ಗಮನ ಮಾಡುವವರಿಗೆ ಹೈಟೆಕ್ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿಎ. ಟಿವಿ ಸ್ಕ್ರೀನ್ ನಲ್ಲಿ ಪ್ರತಿ ಪ್ರಯಾಣಿಕರ ಬಾಡಿ ಟೆಂಪರೇಚರ್ ಚೆಕ್ ಮಾಡಲಾಗುತ್ತಿದೆ. ಬಾಡಿ ಟೆಂಪರೇಚರ್ 38 ಕ್ಕಿಂತ ಜಾಸ್ತಿ ಬಂದ್ರೆ ಪ್ರಯಾಣಕ್ಕೆ ಅವಕಾಶವಿಲ್ಲ.

ಪ್ರತಿ ಅರ್ಧ ಗಂಟೆಗೊಮ್ಮೆ ಇಡೀ ಏರ್ ಪೋರ್ಟ್ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದು 94 ವಿಮಾನ ಗಳು ಏರ್ಪೋರ್ಟಿನಿಂದ ಆಗಮನ ಮತ್ತು ನಿರ್ಗಮನ ಮಾಡಲಿವೆ. 6 ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಹೋಟೆಲ್ ಕ್ವಾರಂಟೈನ್ ಕಡ್ಡಾಯವಾಗಿದ್ದು, ಉಳಿದ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ.

ಹೋಟೆಲ್ ಕ್ವಾರಂಟೈನ್ ಗೆ ನಿರಾಕರಿಸಿ ದೆಹಲಿ ಮತ್ತು ಚೆನ್ನೈನಿಂದ ಬಂದ ಪ್ರಯಾಣಿಕರು ಕ್ಯಾತೆ ತೆಗೆದಿದ್ದಾರೆ. ಈ ಸಂಬಂಧ ಏರ್ ಪೋರ್ಟ್ ಒಳಗೆ ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಹೋಂ ಕ್ವಾರಂಟೈನ್ ಕಳುಹಿಸಿ, ಹೋಟೆಲ್ ಕ್ವಾರಂಟೈನ್ ಗೆ ಹೋಗಲ್ಲ. ಬೇರೆ ಬೇರೆ ರಾಜ್ಯಗಳಿಂದ ದೆಹಲಿಗೆ ಬಂದು ಅಲ್ಲಿಂದ ಬೆಂಗಳೂರಿಗೆ ಬಂದಿದ್ದೀವಿ. ನಾವು ದೆಹಲಿ ರಾಜ್ಯದವರಲ್ಲ ಎಂದು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೋಟೆಲ್ ಕ್ವಾರಂಟೈನ್ ಗೆ ಒಪ್ಪಿಕೊಳ್ಳದ ಪ್ರಯಾಣಿಕರನ್ನು ಸಿಬ್ಬಂದಿ ದೆಹಲಿಗೆ ವಾಪಸ್ ಕಳುಹಿಸಿದ್ದಾರೆ. ಉಳಿದ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗಿದೆ.

ಎಸ್ಕೇಪ್ ಆಗ್ತಿದ್ದ ಮಹಿಳೆ:
ಚೆನ್ನೈನಿಂದ ಬಂದು ಕ್ವಾರಂಟೈನ್ ಆಗದೇ ಏರ್ ಪೋರ್ಟಿನಿಂದ ಮಹಿಳೆಯೊಬ್ಬರು ಎಸ್ಕೇಪ್ ಆಗಲು ಯತ್ನಿಸಿದ್ದು, ಈ ವೇಳೆ ಆಕೆಯನ್ನು ಪಬ್ಲಿಕ್ ಟಿವಿ ಬೆನ್ನಟ್ಟಿದೆ. ಬ್ಯಾರಿಕೇಡ್ ದಾಟಿ ಹೊರಗಡೆ ಬಂದ ದೃಶ್ಯ ನೋಡಿದ ಪಬ್ಲಿಕ್ ಟಿವಿ ಮಹಿಳೆಯನ್ನು ಹಿಂಬಾಲಿಸಿತ್ತು. ಈ ವೇಳೆ ಕ್ಯಾಮೆರಾ ಕಂಡು ಮಹಿಳೆ ಗರಂ ಆಗಿದ್ದಾರೆ.

ಏರ್ ಪೋರ್ಟ್ ಸಿಬ್ಬಂದಿಯ ಕಣ್ತಪ್ಪಿಸಿ ಮಹಿಳೆ ಎಸ್ಕೇಪ್ ಆಗುತ್ತಿದ್ದರು. ಕೂಡಲೇ ಈ ವಿಚಾರ ಸಿಬ್ಬಂದಿಯ ಗಮನಕ್ಕೆ ಬಂದಿದ್ದು, ಮಹಿಳೆಯನ್ನು ವಶಕ್ಕೆ ಪಡೆಯಲಾಗಿದೆ. ಕ್ವಾರಂಟೈನ್ ಆಗದ ವಿಚಾರಕ್ಕೆ ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸುತ್ತಿದ್ದ ವೇಳೆ ಮಹಿಳೆ ಎಸ್ಕೇಪ್ ಆಗಲು ಯತ್ನಿಸಿದ್ದರು. ಇತ್ತ ದೆಹಲಿಯಿಂದ ಆಗಮಿಸಿದ ಕೇಂದ್ರ ಸಚಿವ ಸದಾನಂದ ಗೌಡ ಅವರು ನೇರವಾಗಿ ಹೋಂ ಕ್ವಾರಂಟೈನ್ ಗೆ ತೆರಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *