ಹೆಚ್.ಡಿ ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿದ್ದ 1.20 ಲಕ್ಷ ಹಣ ಜಪ್ತಿ

Public TV
1 Min Read

ಹಾಸನ: ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಬೆಂಗಾವಲು ಪಡೆ ವಾಹನದಲ್ಲಿದ್ದ 1.20 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

ಹಾಸನ ಜಿಲ್ಲೆ ಹೊಳೆನರಸೀಪುರದ ಚನ್ನಾಂಬಿಕಾ ಚಿತ್ರಮಂದಿರ ಮುಂಭಾಗ ಹಣವನ್ನು ಜಪ್ತಿ ಮಾಡಲಾಗಿದೆ. ಚನ್ನಾಂಬಿಕಾ ಚಿತ್ರಮಂದಿರ ಸಚಿವ ಹೆಚ್.ಡಿ ರೇವಣ್ಣ ಮನೆಯ ಪಕ್ಕದಲ್ಲಿದ್ದು, ಚುನಾವಣಾಧಿಕಾರಿಗಳ ತಪಾಸಣೆ ನಡೆಸುವ ವೇಳೆ ಆ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.

ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸುವ ವೇಳೆ ವಾಹನದಲ್ಲಿ ಬೆಂಗಾವಲು ಪಡೆ ಚಾಲಕ ಚಂದ್ರಯ್ಯ, ಪೊಲೀಸ್ ಸಿಬ್ಬಂದಿ ಮತ್ತು ರವಿ ಇದ್ದರು. ಮಂಗಳವಾರ ತಡರಾತ್ರಿ 12.45ರ ಸಮಯದಲ್ಲಿ ತಪಾಸಣೆ ನಡೆಸಿ ಹಣವನ್ನು ಜಪ್ತಿ ಮಾಡಲಾಗಿದೆ.

ಸದ್ಯ ಬೆಂಗಾವಲುಪಡೆ ವಾಹನದಲ್ಲಿದ್ದ ಚಂದ್ರಯ್ಯ ಮತ್ತು ರವಿ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಚುನಾವಣಾಧಿಕಾರಿ ವಿಕಾಸ್ ಎಂಬವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *