ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ – ಇಂದಿನಿಂದ 1 ತಿಂಗಳು ಸಂಪೂರ್ಣ ಬಂದ್

Public TV
1 Min Read

ಚಿಕ್ಕಮಗಳೂರು: ಜಿಲ್ಲೆಯ ಕೆಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಇಂದಿನಿಂದ ಒಂದು ತಿಂಗಳು ಎತ್ತಿನಭುಜ (Ettina Bhuja) ಚಾರಣವನ್ನು ಬಂದ್ ಮಾಡಲಾಗಿದೆ.

ಮೂಡಿಗೆರೆ (Mudigere) ತಾಲೂಕಿನ ಸುಪ್ರಸಿದ್ಧ ಎತ್ತಿನಭುಜಕ್ಕೆ ಪ್ರವಾಸಿಗರು 7 ಕಿ.ಮೀ. ಚಾರಣ ಮಾಡಿ (Trekking) ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. ಆದರೆ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಭಾರೀ ಮಂಜು ಕವಿಯುತ್ತಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಚಾರಣಕ್ಕೆ ಬ್ರೇಕ್ ಹಾಕಿದೆ.ಇದನ್ನೂ ಓದಿ: ಬಾಸ್ ಜೊತೆ ಅಕ್ರಮ ಸಂಬಂಧದ ಶಂಕೆ – ಲಿವ್ ಇನ್ ಗೆಳತಿಯ ಹತ್ಯೆಗೈದು ಶವದೊಂದಿಗೆ ಮಲಗಿದ್ದ 2 ಮಕ್ಕಳ ತಂದೆ

ಚಾರಣ ಮಾಡುವ ವೇಳೆ ಅನಾಹುತವಾದರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯ. ಜೊತೆಗೆ ಯಾವುದೇ ವಾಹನಗಳು ಹೋಗುವುದಿಲ್ಲ, ಹೊತ್ತೇ ತರಬೇಕು. ಅಲ್ಲದೇ ಕಾಡುಪ್ರಾಣಿಗಳ ಕಾಟ, ಮಳೆ, ಜಾರುವ ಪ್ರದೇಶವಾಗಿದ್ದು, ಸ್ಥಳೀಯರು ಚಾರಣವನ್ನ ಬಂದ್ ಮಾಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಮಾಡಿದ್ದಾರೆ.

ಸದ್ಯ ಎತ್ತಿನಭುಜದಲ್ಲಿ ಓರ್ವ ಕಾವಲುಗಾರನ ನೇಮಿಸಲು ಸೂಚಿಸಲಾಗಿದೆ.ಇದನ್ನೂ ಓದಿ: ರಾಮಾಯಣ ಫಸ್ಟ್ ಗ್ಲಿಮ್ಸ್ ನೋಡಲು ತಯಾರಾಗಿ ಎಂದ ಯಶ್

Share This Article