ದಾಳಿ ನೆಪದಲ್ಲಿ ಪೊಲೀಸರಿಂದಲೇ 6 ಕೋಟಿ ಲೂಟಿ – 10 ಮಂದಿ ಪೊಲೀಸರ ಅಮಾನತು

Public TV
2 Min Read

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ 6 ಕೋಟಿ ರೂಪಾಯಿ ದರೋಡೆ ಮಾಡಿದ ಆರೋಪದಡಿ ಮೂವರು ಅಧಿಕಾರಿಗಳು ಸೇರಿದಂತೆ 10 ಮಂದಿ ಪೊಲೀಸರನ್ನು ಬುಧವಾರ ಅಮಾನತುಗೊಳಿಸಲಾಗಿದೆ.

ಆರೋಪಿಗಳನ್ನು ಮುಂಬ್ರಾ ಪೊಲೀಸ್ ಠಾಣೆಯ ಪೊಲೀಸ್ ಇನ್‍ಸ್ಪೆಕ್ಟರ್ ಗೀತಾರಾಮ್ ಶೆವಾಲೆ ಮತ್ತು ಅವರ ಕಿರಿಯ ಅಧಿಕಾರಿಗಳು, ಪೊಲೀಸ್ ಸಬ್ ಇನ್ಸ್‍ಪೆಕ್ಟರ್ (ಪಿಎಸ್‍ಐ) ರವಿ ಮದ್ನೆ ಮತ್ತು ಪಿಎಸ್‍ಐ ಹರ್ಷಲ್ ಕಾಳೆ ಎಂದು ಗುರುತಿಸಲಾಗಿದೆ.

ಥಾಣೆ ನಿವಾಸಿಯೊಬ್ಬರ ಮನೆಯಲ್ಲಿ ಪೊಲೀಸ್ ಅಧಿಕಾರಿಗಳೇ ದರೋಡೆ ನಡೆಸಿದ್ದಾರೆ ಎಂದು ಮಹಾರಾಷ್ಟ್ರದ ಗೃಹ ಸಚಿವರಿಗೆ ಪತ್ರದ ಮೂಲಕ ದೂರು ಸಲ್ಲಿಸಿರುವುದು ಥಾಣೆ ಪೊಲೀಸ್ ಕಮಿಷನರ್ ಜೈ ಜೀತ್ ಸಿಂಗ್ ಅವರ ಗಮನಕ್ಕೆ ಬಂದಿದೆ. ಮುಂಬೈ ಪೊಲೀಸ್ ಇನ್ಸ್‍ಪೆಕ್ಟರ್ ಇಬ್ಬರು ಸಬ್ ಇನ್‍ಸ್ಪೆಕ್ಟರ್‌ಗಳು, ಸಿಬ್ಬಂದಿ ಮತ್ತು ಸಮವಸ್ತ್ರ ಧರಿಸದ ಇತರೆ ವ್ಯಕ್ತಿಗಳು ಏಪ್ರಿಲ್ 12ರ ಮಂಗಳವಾರ ಮುಂಜಾನೆ ಫೈಝಲ್ ಮೆಮನ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳು ತಲಾ 1 ಕೋಟಿ ರೂಪಾಯಿಗಳ ಮೂವತ್ತು ಬಾಕ್ಸ್ ಎಲ್ಲವನ್ನು ಕ್ಯಾಬಿನ್‍ನಲ್ಲಿ ಮುಂಬ್ರಾ ಪೊಲೀಸ್ ಠಾಣೆಗೆ ಕೊಂಡೊಯ್ದಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

police (1)

ಈ ವಿಚಾರವಾಗಿ ಇನ್‍ಸ್ಪೆಕ್ಟರ್ ಗೀತಾರಾಮ್ ಶೆವಾಲೆ ಅವರು ಅಷ್ಟೊಂದು ಹಣ ಎಲ್ಲಿಂದ ಬಂತು ಎಂದು ಪ್ರಶ್ನಿದಾಗ, ಫೈಝಲ್ ಮೆಮನ್ ಅವರು ಎಲ್ಲ ಹಣವನ್ನು ಕಷ್ಟಪಟ್ಟು ದುಡಿದಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರ ಮಾತನ್ನು ಯಾರು ಕೂಡ ನಂಬದೇ, ಹಲ್ಲೆ ನಡೆಸಿದ್ದಾರೆ. ನಂತರ ಇರುವ ಹಣದಲ್ಲಿ ಅರ್ಧದಷ್ಟು ಮೊತ್ತವನ್ನು ನೀಡುವಂತೆ ಗೀತಾರಾಮ್ ಶೆವಾಲೆ ಬೇಡಿಕೆ ಇಟ್ಟಿದ್ದು, ಕೊನೆಗೆ 2 ಕೋಟಿ ಒಪ್ಪಿಕೊಂಡಿದ್ದಾರೆ ಮತ್ತು ಇತರೆ ಪೊಲೀಸ್ ಅಧಿಕಾರಿಗಳಿಗೆ 4 ಕೋಟಿ ಹಣವನ್ನು ಹಂಚಿದ್ದಾರೆ. ಉಳಿದ 24 ಕೋಟಿಯನ್ನು ಮೆಮನ್ ಅವರಿಗೆ ಹಿಂತಿರುಗಿಸಿದ್ದಾರೆ. ಇನ್ನೂ ಗೀತಾರಾಮ್ ಶೆವಾಲೆ ಅವರು ಹಣ ಪಡೆಯುತ್ತಿರುವ ದೃಶ್ಯ ಇನ್‍ಸ್ಪೆಕ್ಟರ್ ಕ್ಯಾಬಿನ್‍ನಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕ್ಯಾಮೆರಾ ಪರಿಶೀಲಿಸಿ, ಆರೋಪಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದೀಗ ಈ ಸಂಬಂಧ ಪೊಲೀಸ್ ಆಯುಕ್ತ ಜೈ ಜೀತ್ ಸಿಂಗ್ ಅವರು ಆರೋಪಿ ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದು, ಹತ್ತು ಮಂದಿಯನ್ನು ಕೆಲಸದಿಂದ ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಬಂಧನಕ್ಕೆ ತೆರಳಿದ್ದ ವೇಳೆ ಹೈಡ್ರಾಮಾ- ಹೊಸ ಮೊಬೈಲ್ ಬಿಸಾಕಿದ ದಿವ್ಯಾ ಹಾಗರಗಿ

Share This Article
Leave a Comment

Leave a Reply

Your email address will not be published. Required fields are marked *