ಶಾಲೆಯ ಮೇಲ್ಚಾವಣಿ ಕುಸಿತ – 10 ಮಂದಿ ಕಾರ್ಮಿಕರಿಗೆ ಗಾಯ

Public TV
1 Min Read

ಭೋಪಾಲ್: ಭಾರತದ ತೇಜಾಜಿ ನಗರದ ನಿರ್ಮಾಣ ಹಂತದಲ್ಲಿರುವ ಶಾಲೆಯ ಮೇಲ್ಛಾವಣಿ ಕುಸಿದು ಹತ್ತು ಕಾರ್ಮಿಕರು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

ಈ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಸಂಭವಿಸಿದ್ದು, ಕಟ್ಟಡ ನಿರ್ಮಾಣ ಸ್ಥಳದಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಎಸ್‍ಡಿಆರ್‍ಎಫ್, ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೆಮೋ ಡಿಸೋಜಾ ಸೋದರ ಮಾವ ಸಾವು – ಆತ್ಮಹತ್ಯೆ ಶಂಕೆ

ಇದೀಗ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಭಾರತದಲ್ಲಿ ಮೂರನೇ ಅಲೆ ಅಧಿಕೃತ – ವಿಶ್ವದಲ್ಲಿ ಕೊರೊನಾ ನಾಲ್ಕನೇ ಅಲೆ ಆರಂಭ

Share This Article
Leave a Comment

Leave a Reply

Your email address will not be published. Required fields are marked *